<p><strong>ಬೆಂಗಳೂರು</strong>: ಪದವಿಪೂರ್ವ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿಗಾಗಿ 2015ರಲ್ಲಿ ನೀಡಲಾದ ಅಧಿಸೂಚನೆಯ ಜತೆಗೆ, ಖಾಲಿ ಇರುವ ಇತರ ಹುದ್ದೆಗಳ ಭರ್ತಿಗಾಗಿಹೆಚ್ಚುವರಿ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿ ಕಲ್ಯಾಣಸಕರ್ನಾಟಕ ಹೋರಾಟಗಾರರು ಗುರುವಾರ ಇಲ್ಲಿಧರಣಿ ನಡೆಸಿದರು.</p>.<p>‘1,130 ಉಪನ್ಯಾಸಕರ ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆಯುತ್ತಿದೆ. ಆದರೆ 3.407 ಹುದ್ದೆಗಳು ಖಾಲಿ ಇವೆ. 2017ರಲ್ಲಿ ಹೊಸಬರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರೂ, ಆ ಸಾಲಿನ ಖಾಲಿ ಹುದ್ದೆಗಳನ್ನು ಸೇರಿಸಲಿಲ್ಲ. 65 ಸಾವಿರಕ್ಕೂ ಅಧಿಕ ಮಂದಿ ಉಪನ್ಯಾಸಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದು, ಈ ನೇಮಕಾತಿಯಲ್ಲೇ ಹೆಚ್ಚುವರಿ ಹುದ್ದೆಗಳನ್ನೂ ಸೇರಿಸಿದರೆ ಅದೆಷ್ಟೋ ಮಂದಿಗೆ ಉದ್ಯೋಗದ ಅವಕಾಶ ಸಿಗುತ್ತದೆ, ಜತೆಗೆ ಶೈಕ್ಷಣಿಕ ಗುಣಮಟ್ಟವೂ ಹೆಚ್ಚಲು ಕಾರಣವಾಗುತ್ತದೆ’ ಎಂದು ಧರಣಿ ನಿರತರು ಆಗ್ರಹಿಸಿದರು.</p>.<p>ಹೈದರಾಬಾದ್ ಕರ್ನಾಟಕ ಹೋರಾಟಗಾರ ಡಾ. ರಜಾಕ್ ಉಸ್ತಾದ್ ನೇತೃತ್ವದಲ್ಲಿ ಈ ಧರಣಿ ನಡೆಯಿತು. ಬಳಿಕ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪದವಿಪೂರ್ವ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿಗಾಗಿ 2015ರಲ್ಲಿ ನೀಡಲಾದ ಅಧಿಸೂಚನೆಯ ಜತೆಗೆ, ಖಾಲಿ ಇರುವ ಇತರ ಹುದ್ದೆಗಳ ಭರ್ತಿಗಾಗಿಹೆಚ್ಚುವರಿ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿ ಕಲ್ಯಾಣಸಕರ್ನಾಟಕ ಹೋರಾಟಗಾರರು ಗುರುವಾರ ಇಲ್ಲಿಧರಣಿ ನಡೆಸಿದರು.</p>.<p>‘1,130 ಉಪನ್ಯಾಸಕರ ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆಯುತ್ತಿದೆ. ಆದರೆ 3.407 ಹುದ್ದೆಗಳು ಖಾಲಿ ಇವೆ. 2017ರಲ್ಲಿ ಹೊಸಬರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರೂ, ಆ ಸಾಲಿನ ಖಾಲಿ ಹುದ್ದೆಗಳನ್ನು ಸೇರಿಸಲಿಲ್ಲ. 65 ಸಾವಿರಕ್ಕೂ ಅಧಿಕ ಮಂದಿ ಉಪನ್ಯಾಸಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದು, ಈ ನೇಮಕಾತಿಯಲ್ಲೇ ಹೆಚ್ಚುವರಿ ಹುದ್ದೆಗಳನ್ನೂ ಸೇರಿಸಿದರೆ ಅದೆಷ್ಟೋ ಮಂದಿಗೆ ಉದ್ಯೋಗದ ಅವಕಾಶ ಸಿಗುತ್ತದೆ, ಜತೆಗೆ ಶೈಕ್ಷಣಿಕ ಗುಣಮಟ್ಟವೂ ಹೆಚ್ಚಲು ಕಾರಣವಾಗುತ್ತದೆ’ ಎಂದು ಧರಣಿ ನಿರತರು ಆಗ್ರಹಿಸಿದರು.</p>.<p>ಹೈದರಾಬಾದ್ ಕರ್ನಾಟಕ ಹೋರಾಟಗಾರ ಡಾ. ರಜಾಕ್ ಉಸ್ತಾದ್ ನೇತೃತ್ವದಲ್ಲಿ ಈ ಧರಣಿ ನಡೆಯಿತು. ಬಳಿಕ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>