‘ನನ್ನ ಫಲಿತಾಂಶ ತಿಳಿಸಿ ಎಂದು ನಾನು ಆರು ವರ್ಷಗಳಿಂದ ಕೇಳುತ್ತಿದ್ದೇನೆ. ನಿಮ್ಮ ಉತ್ತರ ಪತ್ರಿಕೆ ಕಳೆದುಹೋಗಿದ್ದು, ಹೊಸದಾಗಿ ಪರೀಕ್ಷೆ ಬರೆಯಿರಿ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಪಾಠ ಓದಿ 15 ವರ್ಷಗಳು ಕಳೆದಿವೆ. ಪಠ್ಯಗಳು ಬದಲಾಗಿವೆ. ಈಗ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಅಧಿಕಾರಿಗಳು ನನ್ನ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.