<p><strong>ಬೆಂಗಳೂರು: </strong>ಕೋವಿಡ್-19 ತಡೆಯಲು ಆರೋಗ್ಯ ಇಲಾಖೆ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ತಡೆ ನೀಡಿದ ವಿಧಾನ ಸಭಾಧ್ಯಕ್ಷರ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಲುಸಾರ್ವಜನಿಕ ಲೆಕ್ಕಪತ್ರ ಸಮಿತಿ ಚಿಂತನೆ ನಡೆಸಿದೆ.</p>.<p>ಮಾಧ್ಯಮ ಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ, ಹಕ್ಕುಚ್ಯುತಿ ದೂರನ್ನು ನಾವು ಸಲ್ಲಿಸಬೇಕೇ, ಬೇಡವೇ ಎಂಬ ಪ್ರಶ್ನೆಯಿದೆ. ಜೂನ್ 2ರಂದು ಸಮಿತಿ ಸಭೆ ನಡೆಯಲಿದೆ ಎಂದರು.</p>.<p>ಸ್ಪೀಕರ್ ನೊಟೀಸ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಅಡ್ಡಿಯಾಗಿದೆ ಎಂದರು.</p>.<p>ಅವ್ಯವಹಾರ ಸಂಬಂಧಿಸಿದಂತೆ ಪರಿಶೀಲನೆಗೆ ಲೆಕ್ಕಪತ್ರ ಸಮಿತಿ ಭೇಟಿಗೆ ಅವಕಾಶ ನೀಡಿಲ್ಲ. ಸ್ಪೀಕರ್ ಅವರು ಆದೇಶ ಹೊರಡಿಸುವ ಮೂಲಕ ಶಾಸನ ಸಭೆಯ ಕರ್ತವ್ಯಕ್ಕೆ ಧಕ್ಕೆಯಾಗಿದೆ. ಇದು ನಮ್ಮ ಕರ್ತವ್ಯಕ್ಕೆ ಚ್ಯುತಿ ಮಾಡುವ ಪ್ರಯತ್ನವಾಗಿದೆ. ನಮ್ಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ವೆಂಟಿಲೇಟರ್ ಎಷ್ಡು ಹಣಕ್ಕೆ ಖರೀದಿ ಮಾಡಿದ್ದೀರಿ. ಮಾಸ್ಕ್, ಸ್ಯಾನಿಟೈಸರ್ ಎಷ್ಟಕ್ಕೆ ಖರೀದಿ ಮಾಡಿದ್ದೀರಿ. ಇದರ ಬಗ್ಗೆ ಸಾರ್ವಜನಿಕರ ಮುಂದೆ ಬಹಿರಂಗ ಪಡಿಸಿ ಎಂದೂ ಆರೋಗ್ಯ ಸಚಿವ ಶ್ರೀ ರಾಮುಲು ಅವರಿಗೆ ಪಾಟೀಲರು ಸವಾಲು ಹಾಕಿದರು.</p>.<p>ಪಿಪಿಎ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲವೆಂಬ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವ್ಯವಹಾರದ ದೂರು ಬಂದಿತ್ತು. ಅದನ್ನು ಪರಿಶೀಲನೆ ಮಾಡೋಕೆ ನಾವು ಹೊರಟಿದ್ದು. ಇಲ್ಲಿ ಕಾಂಗ್ರೆಸ್ ನವರು ಪರಿಶೀಲನೆಗೆ ಹೊರಟಿರಲಿಲ್ಲ. ಸಮಿತಿ ಹೊರಟಿದ್ದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್-19 ತಡೆಯಲು ಆರೋಗ್ಯ ಇಲಾಖೆ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ತಡೆ ನೀಡಿದ ವಿಧಾನ ಸಭಾಧ್ಯಕ್ಷರ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಲುಸಾರ್ವಜನಿಕ ಲೆಕ್ಕಪತ್ರ ಸಮಿತಿ ಚಿಂತನೆ ನಡೆಸಿದೆ.</p>.<p>ಮಾಧ್ಯಮ ಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ, ಹಕ್ಕುಚ್ಯುತಿ ದೂರನ್ನು ನಾವು ಸಲ್ಲಿಸಬೇಕೇ, ಬೇಡವೇ ಎಂಬ ಪ್ರಶ್ನೆಯಿದೆ. ಜೂನ್ 2ರಂದು ಸಮಿತಿ ಸಭೆ ನಡೆಯಲಿದೆ ಎಂದರು.</p>.<p>ಸ್ಪೀಕರ್ ನೊಟೀಸ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಅಡ್ಡಿಯಾಗಿದೆ ಎಂದರು.</p>.<p>ಅವ್ಯವಹಾರ ಸಂಬಂಧಿಸಿದಂತೆ ಪರಿಶೀಲನೆಗೆ ಲೆಕ್ಕಪತ್ರ ಸಮಿತಿ ಭೇಟಿಗೆ ಅವಕಾಶ ನೀಡಿಲ್ಲ. ಸ್ಪೀಕರ್ ಅವರು ಆದೇಶ ಹೊರಡಿಸುವ ಮೂಲಕ ಶಾಸನ ಸಭೆಯ ಕರ್ತವ್ಯಕ್ಕೆ ಧಕ್ಕೆಯಾಗಿದೆ. ಇದು ನಮ್ಮ ಕರ್ತವ್ಯಕ್ಕೆ ಚ್ಯುತಿ ಮಾಡುವ ಪ್ರಯತ್ನವಾಗಿದೆ. ನಮ್ಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ವೆಂಟಿಲೇಟರ್ ಎಷ್ಡು ಹಣಕ್ಕೆ ಖರೀದಿ ಮಾಡಿದ್ದೀರಿ. ಮಾಸ್ಕ್, ಸ್ಯಾನಿಟೈಸರ್ ಎಷ್ಟಕ್ಕೆ ಖರೀದಿ ಮಾಡಿದ್ದೀರಿ. ಇದರ ಬಗ್ಗೆ ಸಾರ್ವಜನಿಕರ ಮುಂದೆ ಬಹಿರಂಗ ಪಡಿಸಿ ಎಂದೂ ಆರೋಗ್ಯ ಸಚಿವ ಶ್ರೀ ರಾಮುಲು ಅವರಿಗೆ ಪಾಟೀಲರು ಸವಾಲು ಹಾಕಿದರು.</p>.<p>ಪಿಪಿಎ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲವೆಂಬ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವ್ಯವಹಾರದ ದೂರು ಬಂದಿತ್ತು. ಅದನ್ನು ಪರಿಶೀಲನೆ ಮಾಡೋಕೆ ನಾವು ಹೊರಟಿದ್ದು. ಇಲ್ಲಿ ಕಾಂಗ್ರೆಸ್ ನವರು ಪರಿಶೀಲನೆಗೆ ಹೊರಟಿರಲಿಲ್ಲ. ಸಮಿತಿ ಹೊರಟಿದ್ದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>