‘ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ನಡೆಸುವುದು ಸೂಕ್ತವಲ್ಲ. ಆದರೆ, ಮರಗಳನ್ನು ಕಡಿಯುವುದು ಮತ್ತು ಅರಣ್ಯಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯದಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆಯಲೇಬೇಕು. ಆನ್ಲೈನ್ ಮೂಲಕ ಅಭಿಪ್ರಾಯ ದಾಖಲಿಸಲು ವ್ಯವಸ್ಥೆ ಮಾಡಬೇಕು’ ಎಂದು ರಾಜೀವ್ ಚಂದ್ರಶೇಖರ್ ಪತ್ರದಲ್ಲಿ ತಿಳಿಸಿದ್ದಾರೆ.