
ಜನರು ಅತ್ತ ದರಿ ಇತ್ತ ಪುಲಿ ಎಂಬಂತಹ ಪರಿಸ್ಥಿತಿಯಲ್ಲಿದ್ದಾರೆ ಎಂಬುದು ಸರ್ಕಾರಕ್ಕೆ ಮತ್ತು ನಮ್ಮ ಮೆಟ್ರೊಗೆ ತಿಳಿದಿದೆ. ಜನರು ದುಬಾರಿ ದರ ಪಾವತಿಸಬೇಕು ಇಲ್ಲವೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಳ್ಳಬೇಕು. ಜನರ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ.– ಜಿ. ಶಶಿಕುಮಾರ್, ಬೆಂಗಳೂರು ಉಳಿಸಿ ಸಮಿತಿ ಸಂಚಾಲಕ
ಈಗಾಗಲೇ ಸಾಮಾನ್ಯ ಜನರ ಕೈಗೆಟುಕದಂತಾಗಿರುವ ನಮ್ಮ ಮೆಟ್ರೊ ದರ ಮತ್ತಷ್ಟು ದುಬಾರಿಯಾಗಲಿದೆ. ದರ ನಿಗದಿ ಸಮಿತಿ ಶಿಫಾರಸು ಮಾಡಿದೆ ಎಂಬ ಕಾರಣಕ್ಕೆ ಕಡ್ಡಾಯವಾಗಿ ದರ ಏರಿಕೆ ಮಾಡಬೇಕು ಎಂದು ಬಿಎಂಆರ್ಸಿಎಲ್ ಅಂದುಕೊಂಡಿದೆ. ಹಾಗಾದರೆ ಅದೇ ದರ ನಿಗದಿ ಸಮಿತಿ ಕಳೆದ ವರ್ಷ ಶೇ 51.55 ಏರಿಕೆ ಮಾಡಿ ಎಂದು ಶಿಫಾರಸು ಮಾಡಿದ್ದಾಗ ಶೇ 100ರಷ್ಟು ಯಾಕೆ ಮಾಡಿತು? ಪ್ರಯಾಣಿಕರ ವಿರೋಧ ಬಂದ ಮೇಲೆ ಶೇ 71.5ಕ್ಕೆ ಯಾಕೆ ಇಳಿಸಿತು?– ಶ್ರೀಯಾ, ಮೆಟ್ರೊ ಪ್ರಯಾಣಿಕರು
ಕಳೆದ ವರ್ಷ ಜನರ ವಿರೋಧದ ನಡುವೆಯೂ ಶೇ 100 ದರ ಹೆಚ್ಚಿಸುವ ಮೂಲಕ ಬಿಎಂಆರ್ಸಿಎಲ್ ಜನವಿರೋಧಿ ಎಂಬುದನ್ನು ಸಾಬೀತು ಮಾಡಿತ್ತು. ಈಗ ಮತ್ತೆ ಶೇ 5ರಷ್ಟು ಹೆಚ್ಚಳ ಮಾಡಿರುವುದು ನಾಚಿಕೆಗೇಡಿನ ವರ್ತನೆಯಾಗಿದೆ. ಮೆಟ್ರೊ ಪ್ರಯಾಣಿಕರು ಈ ದರ ಹೆಚ್ಚಳವನ್ನು ಒಪ್ಪುವುದಿಲ್ಲ.– ರಾಜೇಶ್ ಭಟ್, ಬೆಂಗಳೂರು ಮೆಟ್ರೊ ಪ್ರಯಾಣಿಕರ ಸಂಘಟನೆ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.