<p><strong>ಬೆಂಗಳೂರು:</strong> ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್ಗಳ ನೇಮಕಾತಿಗಾಗಿ ಮೈತ್ರಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಪ್ರಕ್ರಿಯೆಯನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರದ್ದುಪಡಿಸಿದೆ.</p>.<p>ಈ ಹುದ್ದೆಗಳೂ ಸೇರಿದಂತೆ ಒಟ್ಟು 1 ಸಾವಿರ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮೂಲಕ ನಡೆಸಲು ತೀರ್ಮಾನಿಸಿದೆ.</p>.<p>ಕೆಪಿಎಸ್ಸಿ ಮೂಲಕ ನೇಮಕಾತಿ ಮಾಡಿಕೊಂಡರೆ ವಿಳಂಬವಾಗುತ್ತದೆ ಎಂಬ ನೆಪವೊಡ್ಡಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ ತರಾತುರಿಯಲ್ಲಿ ಎಂಜಿನಿಯರ್ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕ ಮಾಡಿಕೊಳ್ಳಲು ಈ ಹಿಂದಿನ ಸಮ್ಮಿಶ್ರ ಸರ್ಕಾರ ನಿರ್ಧರಿಸಿತ್ತು. ಈ ಸಲುವಾಗಿ ‘ಲೋಕೋಪಯೋಗಿ ಇಲಾಖೆಯ ಸೇವಾ ನಿಯಮಗಳು–2019 (ವಿಶೇಷ ನೇಮಕಾತಿ)’ ಸಿದ್ಧಪಡಿಸಿ, 570 ಸಹಾಯಕ ಎಂಜಿನಿಯರ್ಗಳು ಹಾಗೂ 300 ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಈ ವರ್ಷದ ಮಾರ್ಚ್ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕಾಗಿ ಇಲಾಖೆಯಲ್ಲಿ ವಿಶೇಷ ಆಯ್ಕೆ ಸಮಿತಿ ರಚಿಸಲಾಗಿತ್ತು.</p>.<p>ಸಚಿವ ಎಚ್.ಡಿ.ರೇವಣ್ಣ ಇಲಾಖೆಯಲ್ಲಿ ತಮ್ಮ ‘ಬಳಗ’ ದವರನ್ನೇ ತುಂಬಿಸಲು ಮುಂದಾಗಿದ್ದಾರೆ ಎಂಬ ಆರೋಪವೂ ವ್ಯಕ್ತವಾಗಿತ್ತು.</p>.<p>ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಸಮ್ಮಿಶ್ರ ಸರ್ಕಾರ ಪತನವಾಗಿತ್ತು. ಬಿಜೆಪಿ ಸರ್ಕಾರವು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿತ್ತು. ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸಾವಿರಾರು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಇದೀಗ, ಇಡೀ ನೇಮಕ ಪ್ರಕ್ರಿಯೆಯನ್ನೇ ರದ್ದುಪಡಿಸಲಾಗಿದೆ. ಈ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಈ ಅಭ್ಯರ್ಥಿಗಳ ವಯೋಮಿತಿ ಮೀರಿದ್ದರೆ ಅಧಿಸೂಚನೆಗೆ ಅನ್ವಯವಾಗುವಂತೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಮೂಲಗಳು ತಿಳಿಸಿವೆ.</p>.<p>600 ಸಹಾಯಕ ಎಂಜಿನಿಯರ್ಗಳು, 325 ಕಿರಿಯ ಎಂಜಿನಿಯರ್ಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್ಸಿ ನಡೆಸಲಿದೆ. ಈ ಸಂಬಂಧ ಕೆಪಿಎಸ್ಸಿಗೆ ಲೋಕೋಪಯೋಗಿ ಇಲಾಖೆ ನವೆಂಬರ್ 27ರಂದು ಪತ್ರ ಬರೆದಿದೆ.</p>.<p><strong>ಉನ್ನತ ಮಟ್ಟದ ತೀರ್ಮಾನ?</strong></p>.<p>‘ಕೊನೆಯ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿದರೆ ಅರ್ಹ ಅಭ್ಯರ್ಥಿಗಳಿಗೂ ಅನ್ಯಾಯ ಆಗುವ ಸಾಧ್ಯತೆ ಇದೆ. ಹಾಗಾಗಿ, ಇದನ್ನು ರದ್ದುಪಡಿಸುವುದು ಬೇಡ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆವು. ಮೈತ್ರಿ ಸರ್ಕಾರದ ಅವಧಿಯ ನೇಮಕಾತಿ ಬಗ್ಗೆ ಬಿಜೆಪಿಯಲ್ಲೂ ಚರ್ಚೆ ನಡೆದಿತ್ತು. ಈ ಬಗ್ಗೆ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದು ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್ಗಳ ನೇಮಕಾತಿಗಾಗಿ ಮೈತ್ರಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಪ್ರಕ್ರಿಯೆಯನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರದ್ದುಪಡಿಸಿದೆ.</p>.<p>ಈ ಹುದ್ದೆಗಳೂ ಸೇರಿದಂತೆ ಒಟ್ಟು 1 ಸಾವಿರ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮೂಲಕ ನಡೆಸಲು ತೀರ್ಮಾನಿಸಿದೆ.</p>.<p>ಕೆಪಿಎಸ್ಸಿ ಮೂಲಕ ನೇಮಕಾತಿ ಮಾಡಿಕೊಂಡರೆ ವಿಳಂಬವಾಗುತ್ತದೆ ಎಂಬ ನೆಪವೊಡ್ಡಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ ತರಾತುರಿಯಲ್ಲಿ ಎಂಜಿನಿಯರ್ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕ ಮಾಡಿಕೊಳ್ಳಲು ಈ ಹಿಂದಿನ ಸಮ್ಮಿಶ್ರ ಸರ್ಕಾರ ನಿರ್ಧರಿಸಿತ್ತು. ಈ ಸಲುವಾಗಿ ‘ಲೋಕೋಪಯೋಗಿ ಇಲಾಖೆಯ ಸೇವಾ ನಿಯಮಗಳು–2019 (ವಿಶೇಷ ನೇಮಕಾತಿ)’ ಸಿದ್ಧಪಡಿಸಿ, 570 ಸಹಾಯಕ ಎಂಜಿನಿಯರ್ಗಳು ಹಾಗೂ 300 ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಈ ವರ್ಷದ ಮಾರ್ಚ್ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕಾಗಿ ಇಲಾಖೆಯಲ್ಲಿ ವಿಶೇಷ ಆಯ್ಕೆ ಸಮಿತಿ ರಚಿಸಲಾಗಿತ್ತು.</p>.<p>ಸಚಿವ ಎಚ್.ಡಿ.ರೇವಣ್ಣ ಇಲಾಖೆಯಲ್ಲಿ ತಮ್ಮ ‘ಬಳಗ’ ದವರನ್ನೇ ತುಂಬಿಸಲು ಮುಂದಾಗಿದ್ದಾರೆ ಎಂಬ ಆರೋಪವೂ ವ್ಯಕ್ತವಾಗಿತ್ತು.</p>.<p>ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಸಮ್ಮಿಶ್ರ ಸರ್ಕಾರ ಪತನವಾಗಿತ್ತು. ಬಿಜೆಪಿ ಸರ್ಕಾರವು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿತ್ತು. ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸಾವಿರಾರು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಇದೀಗ, ಇಡೀ ನೇಮಕ ಪ್ರಕ್ರಿಯೆಯನ್ನೇ ರದ್ದುಪಡಿಸಲಾಗಿದೆ. ಈ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಈ ಅಭ್ಯರ್ಥಿಗಳ ವಯೋಮಿತಿ ಮೀರಿದ್ದರೆ ಅಧಿಸೂಚನೆಗೆ ಅನ್ವಯವಾಗುವಂತೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಮೂಲಗಳು ತಿಳಿಸಿವೆ.</p>.<p>600 ಸಹಾಯಕ ಎಂಜಿನಿಯರ್ಗಳು, 325 ಕಿರಿಯ ಎಂಜಿನಿಯರ್ಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್ಸಿ ನಡೆಸಲಿದೆ. ಈ ಸಂಬಂಧ ಕೆಪಿಎಸ್ಸಿಗೆ ಲೋಕೋಪಯೋಗಿ ಇಲಾಖೆ ನವೆಂಬರ್ 27ರಂದು ಪತ್ರ ಬರೆದಿದೆ.</p>.<p><strong>ಉನ್ನತ ಮಟ್ಟದ ತೀರ್ಮಾನ?</strong></p>.<p>‘ಕೊನೆಯ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿದರೆ ಅರ್ಹ ಅಭ್ಯರ್ಥಿಗಳಿಗೂ ಅನ್ಯಾಯ ಆಗುವ ಸಾಧ್ಯತೆ ಇದೆ. ಹಾಗಾಗಿ, ಇದನ್ನು ರದ್ದುಪಡಿಸುವುದು ಬೇಡ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆವು. ಮೈತ್ರಿ ಸರ್ಕಾರದ ಅವಧಿಯ ನೇಮಕಾತಿ ಬಗ್ಗೆ ಬಿಜೆಪಿಯಲ್ಲೂ ಚರ್ಚೆ ನಡೆದಿತ್ತು. ಈ ಬಗ್ಗೆ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದು ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>