<p><strong>ಬೆಂಗಳೂರು: </strong>ನೇಮಕಾತಿ ಆದೇಶದ ಪ್ರತಿ ನೀಡಬೇಕೆಂದು ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಹೋರಾತ್ರಿ ಧರಣಿ ಶುಕ್ರವಾರ 6ನೇ ದಿನಕ್ಕೆ ಕಾಲಿಟ್ಟಿದೆ.</p>.<p>ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿಯ ಎದುರು ಒಂದು ವಾರದಿಂದ ನೂರಾರು ಉಪನ್ಯಾಸಕ ಅಭ್ಯರ್ಥಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ದಾವಣಗೆರೆ, ರಾಯಚೂರು, ಕೊಪ್ಪಳ, ಕಲಬುರ್ಗಿ ಸೇರಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ಉಪನ್ಯಾಸಕ ಅಭ್ಯರ್ಥಿಗಳು ಹೋರಾಟ ಮುಂದುವರೆಸಿದ್ದಾರೆ. ಈ ಪೈಕಿ, ಕೆಲವು ಮಹಿಳಾ ಅಭ್ಯರ್ಥಿಗಳು ಕಂಕುಳಲ್ಲಿ ಮಗು ಎತ್ತಿಕೊಂಡು ಬಂದಿದ್ದಾರೆ.</p>.<p>ಪ್ರತಿಭಟನೆ ನಿರತ ಅಭ್ಯರ್ಥಿ ಮಮತಾ ಮಾತನಾಡಿ, ‘ಸರ್ಕಾರ ಕೂಡಲೇ ನೇಮಕಾತಿ ಆದೇಶದ ಪ್ರತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p class="Subhead">ಕೆ.ಟಿ. ಶ್ರೀಕಂಠೇಗೌಡ ಭೇಟಿ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಪ್ರತಿಭಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಉಪನ್ಯಾಸಕ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.</p>.<p class="Briefhead"><strong>‘ನನ್ನಲ್ಲಿ ಭರವಸೆ ಇಡಿ’</strong></p>.<p>‘ನೇಮಕಾತಿ ಆದೇಶ ನೀಡುವ ಕುರಿತು ನನ್ನ ಮೇಲೆ ನೀವು ಭರವಸೆ ಇಡುವುದಾದರೆ ತಕ್ಷಣವೇ ಹೋರಾಟ ಕೈಬಿಡಿ’ ಎಂದು ಧರಣಿ ನಿರತ ಉಪನ್ಯಾಸಕ ಅಭ್ಯರ್ಥಿಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.</p>.<p>ಕ್ವಾರಂಟೈನ್ನಲ್ಲಿರುವ ಅವರು ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ನೇಮಕಾತಿ ಆದೇಶ ನೀಡಬೇಕೆಂದು ಹಟ ಹಿಡಿದು ಕೂಡುವುದು ಒಳ್ಳೆಯದಲ್ಲ. ಹೋರಾಟ ತಾರ್ಕಿಕವಾಗಿರಬೇಕು. ಎಲ್ಲ ಭರವಸೆಗಳು ದೊರೆತ ನಂತರವೂ ಹಟ ಹಿಡಿಯುವುದು ಹೋರಾಟದ ಅರ್ಥ ಕಳೆದುಕೊಳ್ಳುವ ಹಾಗೆ ಮಾಡುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನೇಮಕಾತಿ ಆದೇಶದ ಪ್ರತಿ ನೀಡಬೇಕೆಂದು ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಹೋರಾತ್ರಿ ಧರಣಿ ಶುಕ್ರವಾರ 6ನೇ ದಿನಕ್ಕೆ ಕಾಲಿಟ್ಟಿದೆ.</p>.<p>ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿಯ ಎದುರು ಒಂದು ವಾರದಿಂದ ನೂರಾರು ಉಪನ್ಯಾಸಕ ಅಭ್ಯರ್ಥಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ದಾವಣಗೆರೆ, ರಾಯಚೂರು, ಕೊಪ್ಪಳ, ಕಲಬುರ್ಗಿ ಸೇರಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ಉಪನ್ಯಾಸಕ ಅಭ್ಯರ್ಥಿಗಳು ಹೋರಾಟ ಮುಂದುವರೆಸಿದ್ದಾರೆ. ಈ ಪೈಕಿ, ಕೆಲವು ಮಹಿಳಾ ಅಭ್ಯರ್ಥಿಗಳು ಕಂಕುಳಲ್ಲಿ ಮಗು ಎತ್ತಿಕೊಂಡು ಬಂದಿದ್ದಾರೆ.</p>.<p>ಪ್ರತಿಭಟನೆ ನಿರತ ಅಭ್ಯರ್ಥಿ ಮಮತಾ ಮಾತನಾಡಿ, ‘ಸರ್ಕಾರ ಕೂಡಲೇ ನೇಮಕಾತಿ ಆದೇಶದ ಪ್ರತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p class="Subhead">ಕೆ.ಟಿ. ಶ್ರೀಕಂಠೇಗೌಡ ಭೇಟಿ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಪ್ರತಿಭಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಉಪನ್ಯಾಸಕ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.</p>.<p class="Briefhead"><strong>‘ನನ್ನಲ್ಲಿ ಭರವಸೆ ಇಡಿ’</strong></p>.<p>‘ನೇಮಕಾತಿ ಆದೇಶ ನೀಡುವ ಕುರಿತು ನನ್ನ ಮೇಲೆ ನೀವು ಭರವಸೆ ಇಡುವುದಾದರೆ ತಕ್ಷಣವೇ ಹೋರಾಟ ಕೈಬಿಡಿ’ ಎಂದು ಧರಣಿ ನಿರತ ಉಪನ್ಯಾಸಕ ಅಭ್ಯರ್ಥಿಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.</p>.<p>ಕ್ವಾರಂಟೈನ್ನಲ್ಲಿರುವ ಅವರು ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ನೇಮಕಾತಿ ಆದೇಶ ನೀಡಬೇಕೆಂದು ಹಟ ಹಿಡಿದು ಕೂಡುವುದು ಒಳ್ಳೆಯದಲ್ಲ. ಹೋರಾಟ ತಾರ್ಕಿಕವಾಗಿರಬೇಕು. ಎಲ್ಲ ಭರವಸೆಗಳು ದೊರೆತ ನಂತರವೂ ಹಟ ಹಿಡಿಯುವುದು ಹೋರಾಟದ ಅರ್ಥ ಕಳೆದುಕೊಳ್ಳುವ ಹಾಗೆ ಮಾಡುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>