ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್, ‘ವಲಸಿಗ ಸಮುದಾಯ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿ ವಾಸಿಸುತ್ತಿರುವವರು ಹಾಗೂ ನಗರ ಪ್ರದೇಶದ ಕೋಳೆಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ, ಪೋಲಿಯೊ ಹನಿ ಹಾಕಲಾಗಿದೆ. 2011ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೊ ಪ್ರಕರಣ ವರದಿಯಾಗಿತ್ತು. ಬಳಿಕ ದೇಶದಲ್ಲಿ ಈವರೆಗೆ ಯಾವುದೇ ಪೋಲಿಯೊ ಪ್ರಕರಣ ವರದಿಯಾಗಿಲ್ಲ’ ಎಂದು ತಿಳಿಸಿದರು.