ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ ಪುನೀತ್

Last Updated 16 ಆಗಸ್ಟ್ 2019, 5:40 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿದ ನಟ ಪುನೀತ್ ರಾಜ್‌ಕುಮಾರ್ ಅವರು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ನೆರವು ನೀಡಿದರು.

‘ಫೇಸ್ ಬುಕ್ ಲೈವ್‌ನಲ್ಲೂ ಸಂತ್ರಸ್ತರ ನೆರವಿಗೆ ಮನವಿ ಮಾಡಿದ್ದೆ. ಸಾಕಷ್ಟು ಜನರು ಆರ್ಥಿಕ ನೆರವು ನೀಡಿದ್ದು, ಪರಿಹಾರ ಕಾರ್ಯ ಕೈಗೊಂಡಿದ್ದರು. ನಾನೂ ಮುಖ್ಯಮಂತ್ರಿ ಭೇಟಿಮಾಡಿ ಹಣ ತಲುಪಿಸಿದ್ದೇನೆ’ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ನೆರವು ನೀಡಲಾಗುವುದು. ಸಾರ್ವಜನಿಕರೂ ಸಹ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬರಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT