ನೇತ್ರದಾನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಅಭೀರ್ ಮುಸ್ತಾಫಿ, ’ಪುನೀತ್ ರಾಜ್ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಎರಡು ಸಾವಿರಕ್ಕೂ ಹೆಚ್ಚಿನ ಉದ್ಯೋಗಿಗಳು ನೇತ್ರದಾನ ಮಾಡಲು ಮುಂದಾಗಿದ್ದೇವೆ. ಅಭಿಯಾನದ ಮೊದಲ ದಿನವಾಗಿ 200 ಉದ್ಯೋಗಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ‘ ಎಂದು ಹೇಳಿದರು.