‘ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್ ಠಾಣೆಗೆ ಭೇಟಿ ನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ. ಶಾಸಕರಾದ ರಿಜ್ವಾನ್ ಅರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಜೊತೆಗಿದ್ದರು. ಗಲಭೆ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಗುಣಮುಖನಾದ ಬಳಿಕ ಕೆಲವು ದಿನ ಹೋಂ ಕ್ವಾರೆಂಟೈನ್ಗೂ ಒಳಗಾಗಿದ್ದೆ. ಈ ಎಲ್ಲ ಕಾರಣಗಳಿಂದಾಗಿ ಸ್ಥಳಕ್ಕೆ ಈಗ ಭೇಟಿ ನೀಡಿದ್ದೇನೆ’ ಎಂದಿದ್ದಾರೆ.