<p><strong>ಬೆಂಗಳೂರು:</strong> ಬಾಬರಿ ಮಸೀದಿ ಧ್ವಂಸ, ಘರ್ ವಾಪ್ಸಿಯಂತಹ ಚಟುವಟಿಕೆಗಳು ದ್ವೇಷವನ್ನು ಹುಟ್ಟಿಸುತ್ತದೆ. ಇಂತಹ ರಾಜಕಾರಣವನ್ನು ಹತ್ತಿಕ್ಕದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ ಎಂದು ಹಿರಿಯ ಲೇಖಕ ರಾಮ್ ಪುನಿಯಾನಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ದಕ್ಷಿಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ‘ಸಮಕಾಲೀನ ತಲ್ಲಣಗಳು’ ಕುರಿತ ವಿಚಾರಸಂಕಿರಣದಲ್ಲಿ ಅವರು ‘ಕೋಮುವಾದದಿಂದ ಉಂಟಾಗಿರುವ ಪ್ರಕ್ಷುಬ್ಧತೆ’ ಬಗ್ಗೆ ಮಾತನಾಡಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರಂತಹ ನಾಯಕರು ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜನರನ್ನು ಒಗ್ಗೂಡಿಸಲು ಯತ್ನಿಸಿದ್ದರು. ಆ ಸಮಯದಲ್ಲಿ ಇನ್ನೊಂದು ವರ್ಗವು ಧರ್ಮದ ಹೆಸರಿನಲ್ಲಿ ಒಡಕು ಮೂಡಿಸುವ ಪ್ರಯತ್ನ ನಡೆಸಿತ್ತು. ಅಂತಹವರೇ ಇಂದು ಅಧಿಕಾರಕ್ಕೆ ಬಂದಿದ್ದಾರೆ. ಬ್ರಿಟಿಷರಂತೆಯೇ ಇವರು ಸಮಾಜವನ್ನು ಒಡೆದು ಆಳುತ್ತಿದ್ದಾರೆ’ ಎಂದರು.</p>.<p>‘ದೇವಸ್ಥಾನ, ಗೋವು ಮುಂತಾದ ಭಾವನಾತ್ಮಕ ವಿಚಾರವನ್ನೊಳಗೊಂಡ ರಾಜಕಾರಣ ತಿರಸ್ಕರಿಸಬೇಕಾಗಿದೆ. ಅವರು ಧರ್ಮದ ಆಧಾರದಲ್ಲಿ ಮನಸುಗಳನ್ನು ಒಡೆದಷ್ಟೂ ನಾವು ಮತ್ತೆ ಕಟ್ಟಬೇಕಿದೆ. ಪ್ರೀತಿಯ ಮೂಲಕ ದ್ವೇಷವನ್ನು ಮಣಿಸಬೇಕಿದೆ’ ಎಂದರು.</p>.<p>ವಿಮರ್ಶಕಿ ಎಂ.ಎಸ್.ಆಶಾದೇವಿ, ‘ದೇಶದ ಮೂಲಶಕ್ತಿಯಾದ ಬಹುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ. ದೇಶ ಸರ್ವಜನಾಂಗದ ಶಾಂತಿಯ ತೋಟವಾಗುವ ಬದಲು ಸರ್ವಾಧಿಕಾರಿ ಆಡಳಿತದತ್ತ ಹೊರಳುತ್ತಿದೆ’ ಎಂದರು.</p>.<p><strong>‘370ನೇ ವಿಧಿ ರದ್ದು ಎಷ್ಟು ಸರಿ?’</strong></p>.<p>‘ಕಾಶ್ಮೀರದಲ್ಲಿ ಸಂವಿಧಾನದ 370ನೇ ಕಲಂ ನಿಷ್ಕ್ರಿಯಗೊಳಿಸಿದ್ದು ಸಂವಿಧಾನ ವಿರೋಧಿ ಹಾಗೂ ದೇಶ ವಿರೋಧಿ ಕೃತ್ಯವಲ್ಲವೇ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಪ್ರಶ್ನಿಸಿದರು.</p>.<p>‘ಕಾಶ್ಮೀರದ ರಾಜ ಹರಿಸಿಂಗ್ ಹಾಗೂ ಆಗಿನ ಕೇಂದ್ರ ಸರ್ಕಾರ ನಡುವಿನ ಪವಿತ್ರ ಒಪ್ಪಂದವನ್ನು ರದ್ದುಪಡಿಸಲಾಗಿದೆ. ಅದನ್ನು ರದ್ದು ಮಾಡಬೇಕಿದ್ದರೆ, ಅಲ್ಲಿನ ವಿಧಾನಸಭೆಯ ಸಮ್ಮತಿ ಅಗತ್ಯ. ಆದರೆ, ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇಲ್ಲದಿದ್ದಾಗ ಈ ತೀರ್ಮಾನ ಕೈಗೊಂಡಿದ್ದು ಎಷ್ಟರಮಟ್ಟಿಗೆ ಸರಿ’ ಎಂದರು.</p>.<p>‘ಇಂತಹ ಬೆಳವಣಿಗೆ ಬಗ್ಗೆ ಧ್ವನಿ ಎತ್ತದಿದ್ದರೆ ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆ ಅಪಾಯಕ್ಕೆ ಸಿಲುಕಲಿದೆ. ಮುಂದೊಂದು ದಿನ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನೂ ಇದೇ ರೀತಿ ಛಿದ್ರಗೊಳಿಸಲೂಬಹುದು’ ಎಂದರು.</p>.<p>‘ಇಂತಹ ಅಪಾಯಕಾರಿ ಬೆಳವಣಿಗೆಗಳು ನಡೆದರೂ ದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿಲ್ಲ. ಈ ಕ್ರಮವನ್ನು ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾದರೂಸುಪ್ರೀಂ ಕೋರ್ಟ್ ತ್ವರಿತ ವಿಚಾರಣೆ ನಡೆಸಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಬರಿ ಮಸೀದಿ ಧ್ವಂಸ, ಘರ್ ವಾಪ್ಸಿಯಂತಹ ಚಟುವಟಿಕೆಗಳು ದ್ವೇಷವನ್ನು ಹುಟ್ಟಿಸುತ್ತದೆ. ಇಂತಹ ರಾಜಕಾರಣವನ್ನು ಹತ್ತಿಕ್ಕದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ ಎಂದು ಹಿರಿಯ ಲೇಖಕ ರಾಮ್ ಪುನಿಯಾನಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ದಕ್ಷಿಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ‘ಸಮಕಾಲೀನ ತಲ್ಲಣಗಳು’ ಕುರಿತ ವಿಚಾರಸಂಕಿರಣದಲ್ಲಿ ಅವರು ‘ಕೋಮುವಾದದಿಂದ ಉಂಟಾಗಿರುವ ಪ್ರಕ್ಷುಬ್ಧತೆ’ ಬಗ್ಗೆ ಮಾತನಾಡಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರಂತಹ ನಾಯಕರು ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜನರನ್ನು ಒಗ್ಗೂಡಿಸಲು ಯತ್ನಿಸಿದ್ದರು. ಆ ಸಮಯದಲ್ಲಿ ಇನ್ನೊಂದು ವರ್ಗವು ಧರ್ಮದ ಹೆಸರಿನಲ್ಲಿ ಒಡಕು ಮೂಡಿಸುವ ಪ್ರಯತ್ನ ನಡೆಸಿತ್ತು. ಅಂತಹವರೇ ಇಂದು ಅಧಿಕಾರಕ್ಕೆ ಬಂದಿದ್ದಾರೆ. ಬ್ರಿಟಿಷರಂತೆಯೇ ಇವರು ಸಮಾಜವನ್ನು ಒಡೆದು ಆಳುತ್ತಿದ್ದಾರೆ’ ಎಂದರು.</p>.<p>‘ದೇವಸ್ಥಾನ, ಗೋವು ಮುಂತಾದ ಭಾವನಾತ್ಮಕ ವಿಚಾರವನ್ನೊಳಗೊಂಡ ರಾಜಕಾರಣ ತಿರಸ್ಕರಿಸಬೇಕಾಗಿದೆ. ಅವರು ಧರ್ಮದ ಆಧಾರದಲ್ಲಿ ಮನಸುಗಳನ್ನು ಒಡೆದಷ್ಟೂ ನಾವು ಮತ್ತೆ ಕಟ್ಟಬೇಕಿದೆ. ಪ್ರೀತಿಯ ಮೂಲಕ ದ್ವೇಷವನ್ನು ಮಣಿಸಬೇಕಿದೆ’ ಎಂದರು.</p>.<p>ವಿಮರ್ಶಕಿ ಎಂ.ಎಸ್.ಆಶಾದೇವಿ, ‘ದೇಶದ ಮೂಲಶಕ್ತಿಯಾದ ಬಹುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ. ದೇಶ ಸರ್ವಜನಾಂಗದ ಶಾಂತಿಯ ತೋಟವಾಗುವ ಬದಲು ಸರ್ವಾಧಿಕಾರಿ ಆಡಳಿತದತ್ತ ಹೊರಳುತ್ತಿದೆ’ ಎಂದರು.</p>.<p><strong>‘370ನೇ ವಿಧಿ ರದ್ದು ಎಷ್ಟು ಸರಿ?’</strong></p>.<p>‘ಕಾಶ್ಮೀರದಲ್ಲಿ ಸಂವಿಧಾನದ 370ನೇ ಕಲಂ ನಿಷ್ಕ್ರಿಯಗೊಳಿಸಿದ್ದು ಸಂವಿಧಾನ ವಿರೋಧಿ ಹಾಗೂ ದೇಶ ವಿರೋಧಿ ಕೃತ್ಯವಲ್ಲವೇ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಪ್ರಶ್ನಿಸಿದರು.</p>.<p>‘ಕಾಶ್ಮೀರದ ರಾಜ ಹರಿಸಿಂಗ್ ಹಾಗೂ ಆಗಿನ ಕೇಂದ್ರ ಸರ್ಕಾರ ನಡುವಿನ ಪವಿತ್ರ ಒಪ್ಪಂದವನ್ನು ರದ್ದುಪಡಿಸಲಾಗಿದೆ. ಅದನ್ನು ರದ್ದು ಮಾಡಬೇಕಿದ್ದರೆ, ಅಲ್ಲಿನ ವಿಧಾನಸಭೆಯ ಸಮ್ಮತಿ ಅಗತ್ಯ. ಆದರೆ, ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇಲ್ಲದಿದ್ದಾಗ ಈ ತೀರ್ಮಾನ ಕೈಗೊಂಡಿದ್ದು ಎಷ್ಟರಮಟ್ಟಿಗೆ ಸರಿ’ ಎಂದರು.</p>.<p>‘ಇಂತಹ ಬೆಳವಣಿಗೆ ಬಗ್ಗೆ ಧ್ವನಿ ಎತ್ತದಿದ್ದರೆ ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆ ಅಪಾಯಕ್ಕೆ ಸಿಲುಕಲಿದೆ. ಮುಂದೊಂದು ದಿನ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನೂ ಇದೇ ರೀತಿ ಛಿದ್ರಗೊಳಿಸಲೂಬಹುದು’ ಎಂದರು.</p>.<p>‘ಇಂತಹ ಅಪಾಯಕಾರಿ ಬೆಳವಣಿಗೆಗಳು ನಡೆದರೂ ದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿಲ್ಲ. ಈ ಕ್ರಮವನ್ನು ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾದರೂಸುಪ್ರೀಂ ಕೋರ್ಟ್ ತ್ವರಿತ ವಿಚಾರಣೆ ನಡೆಸಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>