<p><strong>ಬೆಂಗಳೂರು:</strong> ನೆಲಮಂಗಲ ತಾಲ್ಲೂಕು ದಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಶುಕ್ರವಾರ ನಿಧನರಾದರು. ಮಠದ ಆವರಣದಲ್ಲಿಯೇ ಪ್ರಮುಖರ ಸಮ್ಮುಖದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.</p>.<p>‘ದೀಪಾವಳಿ ಹಬ್ಬದ ದಿನ ತೀವ್ರ ಅಸ್ವಸ್ಥರಾಗಿದ್ದ ಸ್ವಾಮೀಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ’ ಎಂದು ವಕೀಲ ಅಶೋಕ್ ಹಾರನಹಳ್ಳಿ ತಿಳಿಸಿದ್ದಾರೆ.</p>.<p>ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ವೆಲ್ಲಟೂರು ಇವರ ಹುಟ್ಟೂರು. ಸೇತುಮಾಧವ ಅವಧಾನಿ ಮತ್ತು ಕಲ್ಯಾಣಿ ಬಾಲಾ ತ್ರಿಪುರಸುಂದರಮ್ಮ ಅವರ ಪುತ್ರರಾದ ಇವರ ಪೂರ್ವಾಶ್ರಮದ ಹೆಸರು ಕಮ್ಮಂಬಾಟಿ ನಾಗೇಶ್ವರ ಅವಧಾನಿ.</p>.<p>ವಿಜಯವಾಡದಲ್ಲಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಅಲ್ಲಿಯೇ ಶೃಂಗೇರಿ ಮಠದಲ್ಲಿ ಪಂಚ ಕಾವ್ಯ, ಜ್ಯೋತಿಷ ಶಾಸ್ತ್ರವನ್ನು ಅಧ್ಯಯನ ಮಾಡಿದರು. ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. 2014ರ ಮಾ.3ರಂದು ಅವರನ್ನು ಶಿವಗಂಗಾ ಮಠದ ಪೀಠಾಧಿಪತಿಯಾಗಿ ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನೆಲಮಂಗಲ ತಾಲ್ಲೂಕು ದಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಶುಕ್ರವಾರ ನಿಧನರಾದರು. ಮಠದ ಆವರಣದಲ್ಲಿಯೇ ಪ್ರಮುಖರ ಸಮ್ಮುಖದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.</p>.<p>‘ದೀಪಾವಳಿ ಹಬ್ಬದ ದಿನ ತೀವ್ರ ಅಸ್ವಸ್ಥರಾಗಿದ್ದ ಸ್ವಾಮೀಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ’ ಎಂದು ವಕೀಲ ಅಶೋಕ್ ಹಾರನಹಳ್ಳಿ ತಿಳಿಸಿದ್ದಾರೆ.</p>.<p>ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ವೆಲ್ಲಟೂರು ಇವರ ಹುಟ್ಟೂರು. ಸೇತುಮಾಧವ ಅವಧಾನಿ ಮತ್ತು ಕಲ್ಯಾಣಿ ಬಾಲಾ ತ್ರಿಪುರಸುಂದರಮ್ಮ ಅವರ ಪುತ್ರರಾದ ಇವರ ಪೂರ್ವಾಶ್ರಮದ ಹೆಸರು ಕಮ್ಮಂಬಾಟಿ ನಾಗೇಶ್ವರ ಅವಧಾನಿ.</p>.<p>ವಿಜಯವಾಡದಲ್ಲಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಅಲ್ಲಿಯೇ ಶೃಂಗೇರಿ ಮಠದಲ್ಲಿ ಪಂಚ ಕಾವ್ಯ, ಜ್ಯೋತಿಷ ಶಾಸ್ತ್ರವನ್ನು ಅಧ್ಯಯನ ಮಾಡಿದರು. ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. 2014ರ ಮಾ.3ರಂದು ಅವರನ್ನು ಶಿವಗಂಗಾ ಮಠದ ಪೀಠಾಧಿಪತಿಯಾಗಿ ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>