ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ರೇಟ್‌ ಬೋರ್ಡ್‌ ಹಾಕಿಬಿಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

Published : 19 ಜೂನ್ 2025, 13:25 IST
Last Updated : 19 ಜೂನ್ 2025, 13:25 IST
ಫಾಲೋ ಮಾಡಿ
Comments
‘ಆನ್‌ಲೈನ್‌ ವ್ಯವಸ್ಥೆಯೇ ಪರಿಹಾರ’
‘ಎಂತಹ ಸೂಚನೆ ನೀಡಿದರೂ ಕೆಲ ಅಧಿಕಾರಿ ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ. ಇದನ್ನು ಸರಿಪಡಿಸಬೇಕು ಎಂದಾದರೆ ಇಲಾಖೆಯ ಕಾರ್ಯವೈಖರಿಯಲ್ಲೇ ಬದಲಾವಣೆ ತರಬೇಕು. ಎಲ್ಲ ಕೆಲಸವನ್ನೂ ಆನ್‌ಲೈನ್‌ ಮತ್ತು ಡಿಜಿಟಲ್‌ ರೂಪದಲ್ಲಿ ನಡೆಸುವುದೇ ಇದಕ್ಕೆ ಪರಿಹಾರ’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. ‘ಆನ್‌ಲೈನ್‌ನಲ್ಲಿ ಈ ಕೆಲಸ ಮಾಡುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ. ಕಡತ ಎಲ್ಲಿದೆ ಯಾರ ಬಳಿ ಎಷ್ಟು ದಿನಗಳಿಂದ ಇದೆ ಎಂಬುದರಲ್ಲಿ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಆಗಲಾದರೂ ಜನರಿಗೆ ಅನುಕೂಲವಾಗುತ್ತದೆ’ ಎಂದರು.
‘ಪಾದಪೂಜೆ ಮಾಡಬೇಕೇ’
ಕಚೇರಿಗೆ ತಡವಾಗಿ ಬಂದ ಮತ್ತು ಸಾರ್ವಜನಿಕರು ಕಾದಿದ್ದರೂ ಸ್ಪಂದಿಸದ ಅಧಿಕಾರಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ ಅವರು ‘ನೀವು ಪಾಳೇಗಾರರು. ನಿಮ್ಮ ಕಾಲಿಗೆ ಬೀಳಬೇಕು ಮತ್ತು ಪಾದಪೂಜೆ ಮಾಡಬೇಕು ಅಲ್ಲವೇ. ಕೆಲಸದಲ್ಲಿ ವಿಳಂಬ ಏಕೆ ಮಾಡುತ್ತೀರಿ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT