ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟೇನಹಳ್ಳಿ ಕೆರೆ ಸಂರಕ್ಷಣೆ: ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Last Updated 1 ಸೆಪ್ಟೆಂಬರ್ 2020, 19:40 IST
ಅಕ್ಷರ ಗಾತ್ರ

ಬೆಂಗಳೂರು:ಕೆರೆ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಪುಟ್ಟೇನಹಳ್ಳಿ ಕೆರೆ ಪಕ್ಷಿ ಸಂರಕ್ಷಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಯಲಹಂಕ ಪುಟ್ಟೇನಹಳ್ಳಿ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಟ್ರಸ್ಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ಕೆರೆ ನಿರ್ವಹಣೆ ಜವಾಬ್ದಾರಿಯನ್ನು ಬಿಬಿಎಂಪಿಗೆ ರಾಜ್ಯ ಸರ್ಕಾರ 2019 ಡಿಸೆಂಬರ್‌ನಲ್ಲಿ ಹಸ್ತಾಂತರಿಸಿತ್ತು.ನಿರ್ವಹಣಾ ಸಮಿತಿ ರಚಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

‘2020ರ ಆಗಸ್ಟ್ 24ರಂದು ಸಮಿತಿಯನ್ನು ಮರು ರಚನೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಒಬ್ಬ ಅಧಿಕಾರಿಯನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಿ ಕೂಡಲೇ ಆದೇಶ ಮಾರ್ಪಡಿಸಬೇಕು’ ಎಂದು ಪೀಠ ಆದೇಶಿಸಿತು.

‘ಸದಸ್ಯ ಕಾರ್ಯದರ್ಶಿಯು ನಿಯಮಿತವಾಗಿ ಸಭೆಗಳನ್ನು ನಡೆಸಿ ಕೆರೆ ಸಂರಕ್ಷಣೆಗೆ ಅಗತ್ಯ ಯೋಜನೆಗಳನ್ನು ರೂಪಿಸಬೇಕು. ಕೈಗೊಂಡ ಕ್ರಮಗಳ ಕುರಿತು ಸೆ.30ರೊಳಗೆ ಅಫಿಡವಿಟ್ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT