ಆಕ್ಷೇಪ: ‘ನೇಮಕ ಪ್ರಕ್ರಿಯೆ ರದ್ದುಗೊಳಿಸಿರುವುದು ಕಾನೂನು ಬಾಹಿರ ಕ್ರಮ. ಆದ್ದರಿಂದ ಆದೇಶ ರದ್ದುಗೊಳಿಸಬೇಕು ಹಾಗೂ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕು. ಹೊಸ ಸರ್ಕಾರ ಅಕ್ಟೋಬರ್ 31ರಂದು ನೇಮಕ ಪ್ರಕ್ರಿಯೆ ರದ್ದುಗೊಳಿಸುವ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅದು ಅಸಾಂವಿಧಾನಿಕ’ ಎಂಬುದು ಅರ್ಜಿದಾರರ ಆಕ್ಷೇಪ. ಅರ್ಜಿದಾರರ ಪರ ವಕೀಲ ಎಚ್.ಎಸ್. ಪ್ರಶಾಂತ್ ವಾದ ಮಂಡಿಸಿದರು.