ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರ್‌ ದಯಾನಂದಗೆ ನೋಟಿಸ್‌

Last Updated 17 ಮಾರ್ಚ್ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ನಿಯಮ ಉಲ್ಲಂಘಿಸಿ ಕಾಮಗಾರಿಗಳನ್ನು ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಬೆಂಗಳೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಎಸ್‌.ಎನ್‌. ದಯಾನಂದ ಅವರಿಗೆ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿ ನೋಟಿಸ್ ನೀಡಿದ್ದಾರೆ.

ಕಾಮಗಾರಿಗಳ ಗುತ್ತಿಗೆಗೆ ನಡೆಸಿರುವ ಟೆಂಡರ್ ಪ್ರಕ್ರಿಯೆ, ನೀಡಿರುವ ಕಾರ್ಯಾದೇಶಗಳು ಹಾಗೂ ಬಿಲ್ ಪಾವತಿಯಾಗಿದ್ದರೆ ಈ ಎಲ್ಲ ಮಾಹಿತಿಗಳನ್ನೊಳಗೊಂಡ ದಾಖಲೆಗಳನ್ನು ನೀಡಬೇಕು ಹಾಗೂ ವರದಿ ಕುರಿತು ಸೂಕ್ತ ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

2018–19ರ ಮಾರ್ಚ್‌ವರೆಗೆ ಕಾರ್ಯಪಾಲಕ ಎಂಜಿನಿಯರ್ ಕಚೇರಿ ವ್ಯಾಪ್ತಿಯಲ್ಲಿ ನಡೆದ ಬಹುಕೋಟಿ ಕಾಮಗಾರಿಗಳಿಗೆ ಸಮರ್ಥನೀಯ ದಾಖಲೆಯೇ ಇಲ್ಲ. ನಿಯಮ ಉಲ್ಲಂಘಿಸಿ ಕಾಮಗಾರಿಗಳನ್ನು ಗುತ್ತಿಗೆ ನೀಡಲಾಗಿದೆ ಎಂಬ ಮಾಹಿತಿ ಆಧರಿಸಿದ ವರದಿ ಇದೇ 15ರಂದು ‘ಪ್ರಜಾವಾಣಿ’ಯಲ್ಲಿಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT