‘ಬಡ್ತಿ ಮೀಸಲಾತಿ ಕಾಯ್ದೆ ಪ್ರಕಾರ, ಇಲಾಖೆಯಲ್ಲಿ ಅಂತಿಮ ಜ್ಯೇಷ್ಠತಾ ಪಟ್ಟಿಯನ್ನು ಇನ್ನೂ ಸಿದ್ಧಪಡಿಸಿಲ್ಲ. ಇಲಾಖೆಯಲ್ಲಿ ಇರುವುದು 520 ಎಂಜಿನಿಯರ್ ಹುದ್ದೆಗಳು. ಆದರೂ, 213 ಮಂದಿಯನ್ನು ಕಾರ್ಯನಿರ್ವಾಹಕ ಎಂಜಿನಿಯರ್ ವೃಂದಕ್ಕೆ ಬಡ್ತಿ ನೀಡಲಾಗಿದೆ. 150 ಅರ್ಹ ಅಭ್ಯರ್ಥಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಹುದ್ದೆಗಳು ಇಲ್ಲದಿದ್ದರೂ 114 ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಈ ಎಲ್ಲ ಬಡ್ತಿಗಳನ್ನು ರದ್ದುಪಡಿಸಬೇಕು’ ಎಂದು ಸಮನ್ವಯ ಸಮಿತಿಯ ಅಧ್ಯಕ್ಷ ಡಿ.ಶಿವಶಂಕರ್ ಹಾಗೂ ಕಾನೂನು ಸಲಹೆಗಾರ ಡಿ.ಚಂದ್ರಶೇಖರಯ್ಯ ಆಗ್ರಹಿಸಿದ್ದಾರೆ.