‘ಸ್ಥಳಾಂತರಿಸಿದ ಮರಗಳನ್ನು ಮಂಡೂರು, ಹೊಸಕೋಟೆ ಕೆರೆ, ಬೆಟ್ಟಕೋಟೆ ಅರಣ್ಯ, ಮೈಲನಹಳ್ಳಿ, ಹೆಸರಘಟ್ಟ, ಸೊಣ್ಣೇನಹಳ್ಳಿ, ದಿಬ್ಬೂರು, ಕೃಷ್ಣದೊಡ್ಡಿ, ಹಾರಗದ್ದೆ ಕೆರೆ, ಗುಂಜೂರ್ ಕೆರೆ ಮತ್ತಿತರ ಕಡೆಗಳಲ್ಲಿ ನೆಟ್ಟು ಪೋಷಿಸಲಾಗುತ್ತಿದೆ. ಸ್ಥಳಾಂತರದ ವೇಳೆ ಮರಗಳಿಗೆ ಹಾನಿಯಾಗದಂತೆ, ಅಪಾಯಕಾರಿ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಲಾಗಿದೆ. ಆಯಾ ಮರಗಳಿಗೆ ಹೊಂದಿಕೆಯಾಗುವ ಮಣ್ಣನ್ನು ಗುರುತಿಸಿ, ಅಲ್ಲಿಯೇ ನಾಟಿ ಮಾಡಲಾಗುತ್ತಿದೆ’ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್. ಶಿವಪ್ರಸಾದ್ ಹೇಳಿದ್ದಾರೆ.