<p><strong>ಬೆಂಗಳೂರು</strong>: ಗಾಂಧಿನಗರದ ದೀವಾ ಹೊಟೇಲ್ನಲ್ಲಿ ಕ್ವಾರಂಟೈನ್ನಲ್ಲಿರುವ ಕೆಲವರಿಗೆ, ₹ 25 ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕ (14 ದಿನಗಳಿಗೆ ಮುನ್ನ) ಮನೆಗೆ ಕಳಿಸುವ ಆಮಿಷವೊಡ್ಡಿದ ಪ್ರಕರಣ ಬಯಲಿಗೆ ಬಂದಿದೆ.</p>.<p>ಈ ಬಗ್ಗೆ ಉಪ್ಪಾರಪೇಟೆ ಪೊಲೀಸರಿಗೆವೈದ್ಯರಾದ ಬಿ.ವೈ. ನಂದಾದೂರು ನೀಡಿದ್ದಾರೆ. ಇದೇ 16ರಂದು ದೆಹಲಿಯಿಂದ ಬಂದಿರುವ 70<br />ಪ್ರಯಾಣಿಕರನ್ನು ಗಾಂಧಿನಗರದ ದೀವಾ ಹೊಟೇಲ್ನಲ್ಲಿ 14 ದಿನಗಳ ಕ್ವಾರಂಟೈನ್ನಲ್ಲಿ ಇಡಲಾಗಿದೆ.</p>.<p>18ರಂದು ಬೆಳಿಗ್ಗೆ 11ಕ್ಕೆ ಹೊಟೇಲ್ಗೆ ಅನಧಿಕೃತವಾಗಿ ಪ್ರವೇಶಿಸಿದ ಕೃಷ್ಣೇಗೌಡ ಎಂಬಾತ, ಬ್ರೀಜ್ರಾಣಿ, ಪಿ.ಎಸ್. ಜೈನ್ ಹಾಗೂ ಪ್ರೇಮ್ಕುಮಾರ್ ಅವರನ್ನು ಪರಿಚಯಿಸಿಕೊಂಡರು ಎನ್ನಲಾಗಿದೆ.</p>.<p>ಕ್ವಾರಂಟೈನ್ಗಾಗಿ ಆಗುತ್ತಿರುವ ಖರ್ಚಿನ ಬಗ್ಗೆ ಕೇಳಿದರು. ದಿನಕ್ಕೆ ₹1400 ಬಾಡಿಗೆಯಂತೆ ₹19,600 ಪಾವತಿಸಬೇಕು. ವೈದ್ಯಕೀಯ ಪರೀಕ್ಷೆಗೆ ₹8 ಸಾವಿರ ಕೊಡಬೇಕು ಎಂದು ಅವರು ತಿಳಿಸಿದರು. ಕೃಷ್ಣೇಗೌಡ ತಮಗೆ ₹ 25ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕ ಮನೆಗೆ ಕಳಿಸುವುದಾಗಿ ಆಮಿಷವೊಡ್ಡಿದರು ಎಂದು ನಂದಾ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕೃಷ್ಣೇಗೌಡರಿಗೆ ದುಡ್ಡು ಕೊಡುವ ಬದಲು ಕ್ವಾರಂಟೈನ್ ಮುಗಿಸಿಕೊಂಡೇ ಹೋಗುವುದು ಒಳ್ಳೆಯದು ಎಂಬ ತೀರ್ಮಾನಕ್ಕೆ ಅವರು ಬಂದರು. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ವೈದ್ಯರಿಂದ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗಾಂಧಿನಗರದ ದೀವಾ ಹೊಟೇಲ್ನಲ್ಲಿ ಕ್ವಾರಂಟೈನ್ನಲ್ಲಿರುವ ಕೆಲವರಿಗೆ, ₹ 25 ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕ (14 ದಿನಗಳಿಗೆ ಮುನ್ನ) ಮನೆಗೆ ಕಳಿಸುವ ಆಮಿಷವೊಡ್ಡಿದ ಪ್ರಕರಣ ಬಯಲಿಗೆ ಬಂದಿದೆ.</p>.<p>ಈ ಬಗ್ಗೆ ಉಪ್ಪಾರಪೇಟೆ ಪೊಲೀಸರಿಗೆವೈದ್ಯರಾದ ಬಿ.ವೈ. ನಂದಾದೂರು ನೀಡಿದ್ದಾರೆ. ಇದೇ 16ರಂದು ದೆಹಲಿಯಿಂದ ಬಂದಿರುವ 70<br />ಪ್ರಯಾಣಿಕರನ್ನು ಗಾಂಧಿನಗರದ ದೀವಾ ಹೊಟೇಲ್ನಲ್ಲಿ 14 ದಿನಗಳ ಕ್ವಾರಂಟೈನ್ನಲ್ಲಿ ಇಡಲಾಗಿದೆ.</p>.<p>18ರಂದು ಬೆಳಿಗ್ಗೆ 11ಕ್ಕೆ ಹೊಟೇಲ್ಗೆ ಅನಧಿಕೃತವಾಗಿ ಪ್ರವೇಶಿಸಿದ ಕೃಷ್ಣೇಗೌಡ ಎಂಬಾತ, ಬ್ರೀಜ್ರಾಣಿ, ಪಿ.ಎಸ್. ಜೈನ್ ಹಾಗೂ ಪ್ರೇಮ್ಕುಮಾರ್ ಅವರನ್ನು ಪರಿಚಯಿಸಿಕೊಂಡರು ಎನ್ನಲಾಗಿದೆ.</p>.<p>ಕ್ವಾರಂಟೈನ್ಗಾಗಿ ಆಗುತ್ತಿರುವ ಖರ್ಚಿನ ಬಗ್ಗೆ ಕೇಳಿದರು. ದಿನಕ್ಕೆ ₹1400 ಬಾಡಿಗೆಯಂತೆ ₹19,600 ಪಾವತಿಸಬೇಕು. ವೈದ್ಯಕೀಯ ಪರೀಕ್ಷೆಗೆ ₹8 ಸಾವಿರ ಕೊಡಬೇಕು ಎಂದು ಅವರು ತಿಳಿಸಿದರು. ಕೃಷ್ಣೇಗೌಡ ತಮಗೆ ₹ 25ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕ ಮನೆಗೆ ಕಳಿಸುವುದಾಗಿ ಆಮಿಷವೊಡ್ಡಿದರು ಎಂದು ನಂದಾ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕೃಷ್ಣೇಗೌಡರಿಗೆ ದುಡ್ಡು ಕೊಡುವ ಬದಲು ಕ್ವಾರಂಟೈನ್ ಮುಗಿಸಿಕೊಂಡೇ ಹೋಗುವುದು ಒಳ್ಳೆಯದು ಎಂಬ ತೀರ್ಮಾನಕ್ಕೆ ಅವರು ಬಂದರು. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ವೈದ್ಯರಿಂದ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>