<p><strong>ಬೆಂಗಳೂರು:</strong> ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಉಳಿದುಕೊಂಡಿದ್ದ ಮಹಿಳೆಯೊಬ್ಬರಿಗೆ ಸೋಮವಾರ ರಾತ್ರಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಸಿಗದೇ ನರಳುತ್ತಿದ್ದ ಅವರನ್ನು ಪೊಲೀಸರೇ ಆಸ್ಪತ್ರೆಗೆ ಸೇರಿಸಿದ್ದಾರೆ.</p>.<p>ಹೊರ ರಾಜ್ಯದಿಂದ ಮರಳಿದ್ದ ಮಹಿಳೆಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ರಾತ್ರಿ 9ರ ಸುಮಾರಿಗೆ ಏಕಾಏಕಿ ಮೂರ್ಛೆ ಬಿದ್ದು ಒದ್ದಾಡುತ್ತಿದ್ದರು. ಕೊರೊನಾ ಭೀತಿ ಇದ್ದಿದ್ದರಿಂದ ಯಾರೊಬ್ಬರೂ ಹತ್ತಿರ ಹೋಗಿರಲಿಲ್ಲ. ಕ್ವಾರಂಟೈನ್ ಕೇಂದ್ರ ಸಿಬ್ಬಂದಿ ಸಹ ಮಹಿಳೆ ರಕ್ಷಣೆಗೆ ಮುಂದಾಗಿರಲಿಲ್ಲ.</p>.<p>ಕೇಂದ್ರದಲ್ಲಿ ಕ್ವಾರಂಟೈನ್ಗೆ ಒಳಪಟ್ಟಿದ್ದ ಜನರೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಹೊಯ್ಸಳ ವಾಹನದಲ್ಲಿ ಕೇಂದ್ರಕ್ಕೆ ಬಂದಿದ್ದ ಪೊಲೀಸರೇ, ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು.</p>.<p>ಘಟನೆಯಿಂದ ಆಕ್ರೋಶಗೊಂಡ ಕೇಂದ್ರದ ವಾಸಿಗಳು, ಕೊಠಡಿಯಿಂದ ಹೊರಗೆ ಬಂದು ಘೋಷಣೆ ಕೂಗಿದರು. ‘ಕೇಂದ್ರದಲ್ಲಿ ವ್ಯವಸ್ಥೆಗಳು ಸರಿ ಇಲ್ಲ. ಅನಾರೋಗ್ಯಕ್ಕೆ ತುತ್ತಾದರೂ ಕೇಳುವವರಿಲ್ಲ’ ಎಂದು ಆರೋಪಿಸಿದರು.</p>.<p>‘ಕೊಠಡಿಯಲ್ಲೇ ಮಹಿಳೆ ನರಳಾಡಿದರೂ ಕೇಂದ್ರದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ. ಆಸ್ಪತ್ರೆಗೆ ಕಳುಹಿಸಲೂ ಮುಂದಾಗದೇ ನಿರ್ಲಕ್ಷ್ಯ ವಹಿಸಿದರು’ ಎಂದು ದೂರಿದರು. ಪೊಲೀಸರೇ ಅವರನ್ನು ಸಮಾಧಾನಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಉಳಿದುಕೊಂಡಿದ್ದ ಮಹಿಳೆಯೊಬ್ಬರಿಗೆ ಸೋಮವಾರ ರಾತ್ರಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಸಿಗದೇ ನರಳುತ್ತಿದ್ದ ಅವರನ್ನು ಪೊಲೀಸರೇ ಆಸ್ಪತ್ರೆಗೆ ಸೇರಿಸಿದ್ದಾರೆ.</p>.<p>ಹೊರ ರಾಜ್ಯದಿಂದ ಮರಳಿದ್ದ ಮಹಿಳೆಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ರಾತ್ರಿ 9ರ ಸುಮಾರಿಗೆ ಏಕಾಏಕಿ ಮೂರ್ಛೆ ಬಿದ್ದು ಒದ್ದಾಡುತ್ತಿದ್ದರು. ಕೊರೊನಾ ಭೀತಿ ಇದ್ದಿದ್ದರಿಂದ ಯಾರೊಬ್ಬರೂ ಹತ್ತಿರ ಹೋಗಿರಲಿಲ್ಲ. ಕ್ವಾರಂಟೈನ್ ಕೇಂದ್ರ ಸಿಬ್ಬಂದಿ ಸಹ ಮಹಿಳೆ ರಕ್ಷಣೆಗೆ ಮುಂದಾಗಿರಲಿಲ್ಲ.</p>.<p>ಕೇಂದ್ರದಲ್ಲಿ ಕ್ವಾರಂಟೈನ್ಗೆ ಒಳಪಟ್ಟಿದ್ದ ಜನರೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಹೊಯ್ಸಳ ವಾಹನದಲ್ಲಿ ಕೇಂದ್ರಕ್ಕೆ ಬಂದಿದ್ದ ಪೊಲೀಸರೇ, ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು.</p>.<p>ಘಟನೆಯಿಂದ ಆಕ್ರೋಶಗೊಂಡ ಕೇಂದ್ರದ ವಾಸಿಗಳು, ಕೊಠಡಿಯಿಂದ ಹೊರಗೆ ಬಂದು ಘೋಷಣೆ ಕೂಗಿದರು. ‘ಕೇಂದ್ರದಲ್ಲಿ ವ್ಯವಸ್ಥೆಗಳು ಸರಿ ಇಲ್ಲ. ಅನಾರೋಗ್ಯಕ್ಕೆ ತುತ್ತಾದರೂ ಕೇಳುವವರಿಲ್ಲ’ ಎಂದು ಆರೋಪಿಸಿದರು.</p>.<p>‘ಕೊಠಡಿಯಲ್ಲೇ ಮಹಿಳೆ ನರಳಾಡಿದರೂ ಕೇಂದ್ರದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ. ಆಸ್ಪತ್ರೆಗೆ ಕಳುಹಿಸಲೂ ಮುಂದಾಗದೇ ನಿರ್ಲಕ್ಷ್ಯ ವಹಿಸಿದರು’ ಎಂದು ದೂರಿದರು. ಪೊಲೀಸರೇ ಅವರನ್ನು ಸಮಾಧಾನಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>