<p><strong>ಬೆಂಗಳೂರು:</strong> ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಕುರಿತು ಪರಿಶೀಲನೆ ನಡೆಸಲು ಡಾ.ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಆಂತರಿಕ ತನಿಖಾ ಸಮಿತಿ ರಚಿಸಿದೆ.</p>.<p>2026ರ ಜ.1ರಂದು ಬಿ.ಕಾಂ 5ನೇ ಸೆಮಿಸ್ಟರ್ನ ಅಡ್ವಾನ್ಸ್ಡ್ ಅಕೌಂಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ, ಈ ಆರೋಪವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ನಿರಾಕರಿಸಿದ್ದರು. ಪರೀಕ್ಷೆಯನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಪಿ.ಬಸವರಾಜು ಅವರು ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಕುರಿತು ಸಮಗ್ರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. </p>.<p>ಈ ಎಲ್ಲ ಬೆಳವಣಿಗೆಗಳ ನಂತರ ವಿಶ್ವವಿದ್ಯಾಲಯವು ಸಿಂಡಿಕೇಟ್ ಸದಸ್ಯ ಎಚ್.ಕೃಷ್ಣರಾಮ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.<br> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಕುರಿತು ಪರಿಶೀಲನೆ ನಡೆಸಲು ಡಾ.ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಆಂತರಿಕ ತನಿಖಾ ಸಮಿತಿ ರಚಿಸಿದೆ.</p>.<p>2026ರ ಜ.1ರಂದು ಬಿ.ಕಾಂ 5ನೇ ಸೆಮಿಸ್ಟರ್ನ ಅಡ್ವಾನ್ಸ್ಡ್ ಅಕೌಂಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ, ಈ ಆರೋಪವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ನಿರಾಕರಿಸಿದ್ದರು. ಪರೀಕ್ಷೆಯನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಪಿ.ಬಸವರಾಜು ಅವರು ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಕುರಿತು ಸಮಗ್ರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. </p>.<p>ಈ ಎಲ್ಲ ಬೆಳವಣಿಗೆಗಳ ನಂತರ ವಿಶ್ವವಿದ್ಯಾಲಯವು ಸಿಂಡಿಕೇಟ್ ಸದಸ್ಯ ಎಚ್.ಕೃಷ್ಣರಾಮ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.<br> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>