ಬೆಂಗಳೂರು: ಕೆಲವು ಕಟ್ಟುಪಾಡುಗಳನ್ನು ವಿಧಿಸಿ ಮಾಲ್ಗಳ ಪುನರಾರಂಭಕ್ಕೆ ಅನುಮತಿ ನೀಡಲು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದ ಅವರು, ಮಾಲ್ ಅಸೋಸಿಯೇಷನ್ನವರು ಭೇಟಿ ಮಾಡಿ ಮಾಲ್ ಪುನರಾರಂಭಕ್ಕೆ ಮನವಿ ಮಾಡಿದ್ದು, ಕೆಲವು ರಿಯಾಯ್ತಿಗಳನ್ನೂ ಕೇಳಿದ್ದಾರೆ ಎಂದರು.
ಈ ಕುರಿತು ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚಿಸಲಾಗುವುದು. ಆದಷ್ಟು ಬೇಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.