<p><strong>ಬೆಂಗಳೂರು</strong>: ಕೊರೊನಾ ಹೊರತಾಗಿ ಬೇರೆ ಖಾಯಿಲೆ ಇರುವ ರೋಗಿಗಳನ್ನು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಸಂಬಂಧ ಎಲ್ಲಾ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲು ಬಿಬಿಎಂಪಿ ಆಯುಕ್ತರಿಗೆ ಅವರು ಸೂಚನೆ ನೀಡಿದ್ದಾರೆ. ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಆಗಲಿರುವ ಶಿಕ್ಷೆಯ ಬಗ್ಗೆಯೂಸುತ್ತೋಲೆಯಲ್ಲಿ ದಾಖಲಿಸುವಂತೆ ತಿಳಿಸಿದ್ದಾರೆ.</p>.<p>‘ಕೊರೊನಾ ಸೋಂಕಿತರು ನೇರವಾಗಿ ಆಸ್ಪತ್ರೆಗಳಿಗೆ ಹೋಗಬೇಕಿಲ್ಲ. ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡುವ ಬಿಬಿಎಂಪಿ ಸಿಬ್ಬಂದಿಯೇ ಆಂಬುಲೆನ್ಸ್ ತಂದು ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ಅಲ್ಲಿಯ ತನಕ ಹೊರಗೆ ಬರದೆ ಮನೆಯಲ್ಲೇ ಇರಬೇಕು’ ಎಂದು ಆರ್. ಅಶೋಕ್ ಮನವಿ ಮಾಡಿದರು.</p>.<p>‘ಸೊಂಕಿತರು ಆಸ್ಪತ್ರೆಗೆ ದಾಖಲಾಗುವ ಮುನ್ನ ಕರಾರು ಪತ್ರಕ್ಕೆ ಸಹಿ ಹಾಕಬೇಕು ಎಂಬ ನಿಯಮವನ್ನು ಜಾರಿಗೆ ತಂದಿಲ್ಲ. ಸಹಿ ಹಾಕಿಸಿಕೊಳ್ಳುತ್ತಿದ್ದರೆ ನಿಲ್ಲಿಸುವಂತೆ ಎಚ್ಚರಿಕೆ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ಹೊರತಾಗಿ ಬೇರೆ ಖಾಯಿಲೆ ಇರುವ ರೋಗಿಗಳನ್ನು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಸಂಬಂಧ ಎಲ್ಲಾ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲು ಬಿಬಿಎಂಪಿ ಆಯುಕ್ತರಿಗೆ ಅವರು ಸೂಚನೆ ನೀಡಿದ್ದಾರೆ. ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಆಗಲಿರುವ ಶಿಕ್ಷೆಯ ಬಗ್ಗೆಯೂಸುತ್ತೋಲೆಯಲ್ಲಿ ದಾಖಲಿಸುವಂತೆ ತಿಳಿಸಿದ್ದಾರೆ.</p>.<p>‘ಕೊರೊನಾ ಸೋಂಕಿತರು ನೇರವಾಗಿ ಆಸ್ಪತ್ರೆಗಳಿಗೆ ಹೋಗಬೇಕಿಲ್ಲ. ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡುವ ಬಿಬಿಎಂಪಿ ಸಿಬ್ಬಂದಿಯೇ ಆಂಬುಲೆನ್ಸ್ ತಂದು ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ಅಲ್ಲಿಯ ತನಕ ಹೊರಗೆ ಬರದೆ ಮನೆಯಲ್ಲೇ ಇರಬೇಕು’ ಎಂದು ಆರ್. ಅಶೋಕ್ ಮನವಿ ಮಾಡಿದರು.</p>.<p>‘ಸೊಂಕಿತರು ಆಸ್ಪತ್ರೆಗೆ ದಾಖಲಾಗುವ ಮುನ್ನ ಕರಾರು ಪತ್ರಕ್ಕೆ ಸಹಿ ಹಾಕಬೇಕು ಎಂಬ ನಿಯಮವನ್ನು ಜಾರಿಗೆ ತಂದಿಲ್ಲ. ಸಹಿ ಹಾಕಿಸಿಕೊಳ್ಳುತ್ತಿದ್ದರೆ ನಿಲ್ಲಿಸುವಂತೆ ಎಚ್ಚರಿಕೆ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>