‘ಆರೋಗ್ಯ ಇಲಾಖೆಗೆ ಅನಾರೋಗ್ಯ’
‘ಆರೋಗ್ಯ ಇಲಾಖೆಯೇ ಈಗ ‘ಅನಾರೋಗ್ಯ’ ಪೀಡಿತವಾಗಿದ್ದು, ಸರ್ಕಾರಿ ಆಸ್ಪತ್ರೆಗಳು ಕೋಮಾ ಸ್ಥಿತಿಗೆ ತಲುಪಿವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದ್ದಾರೆ.
‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ‘ಎಕ್ಸ್’ ಮಾಡಿರುವ ಅವರು, ‘ರಾಜ್ಯದ ತಾಲ್ಲೂಕು ಆಸ್ಪತ್ರೆಗಳ ದಯನೀಯ ಸ್ಥಿತಿ ಬಹಿರಂಗವಾಗಿದೆ. ಸರ್ಕಾರಿ
ಆಸ್ಪತ್ರೆಗಳಲ್ಲಿ ಔಷಧಗಳಿಲ್ಲದೆ ಬಡ ರೋಗಿಗಳು ಖಾಸಗಿ ಔಷಧ ಕೇಂದ್ರ ಗಳಿಗೆ ಅಲೆದಾಡುತ್ತಿದ್ದಾರೆ. ತಜ್ಞ ವೈದ್ಯರು ಹಾಗೂ ಶುಶ್ರೂಷಕರ ಹುದ್ದೆಗಳು ಖಾಲಿ ಉಳಿದಿದ್ದು, ಚಿಕಿತ್ಸೆ ವಿಳಂಬವಾಗುತ್ತಿದೆ. ಸುಳ್ಳು ಸಮರ್ಥನೆಗಳನ್ನು ಬಿಟ್ಟು ಆಸ್ಪತ್ರೆಗಳಿಗೆ ಕಾಯಕಲ್ಪ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.