<p><strong>ದೇವನಹಳ್ಳಿ:</strong> ‘ಕೆ.ಆರ್.ಎಸ್ ಅಣೆಕಟ್ಟುಸುರಕ್ಷಿತವಾಗಿದೆ. ಈ ಬಗ್ಗೆ ಗಣಿ ಇಲಾಖೆ ಸಚಿವರು ಮತ್ತು ಸಂಬಂಧಪಟ್ಟ ಎಂಜಿನಿಯರ್ಗಳಿಂದ ಮಾಹಿತಿ ಪಡೆಯಲಾಗಿದೆ. ಯಾವುದೇ ಅನುಮಾನ ಇದ್ದರೆ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕೆ ಹೊರತು, ಈ ವಿಚಾರವನ್ನು ದೊಡ್ಡವಿವಾದ ಮಾಡುವುದು ಬೇಡ‘ ಎಂದು ಕಂದಾಯ ಸಚಿವ ಆರ್.ಅಶೊಕ ಅವರು ಸಂಸದೆ ಸುಮಲತಾ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ರಾಜ್ಯಪಾಲಥಾವರಚಂದ್ ಗೆಹಲೋತ್ ಅವರನ್ನು ಬರಮಾಡಿಕೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕೆ.ಆರ್.ಎಸ್ ಅಣೆಕಟ್ಟು ಬಿರುಕು ಬಿಟ್ಟಿದೆ ಎನ್ನುವ ವಿಚಾರ ಕುರಿತು ಸರ್ಕಾರ ಏನನ್ನೂ ಹೇಳುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ. ಅಣೆಕಟ್ಟು ಸುರಕ್ಷಿತವಾಗಿದೆ. ಈ ಹಿಂದೆ ದುರಸ್ತಿ ಮಾಡಲಾಗಿದೆ.ಈ ಬಗ್ಗೆ ನೀರಾವರಿ ಇಲಾಖೆ ಎಂಜಿನಿಯರ್ಗಳು ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>’ಈ ವಿಷಯ ರಾಜಕೀಯ ದಾಳವಾಗಬಾರದು. ಯಾರ ಮನಸ್ಸಿಗೂ ನೋವುಂಟು ಮಾಡುವ ಕೆಲಸವಾಗಬಾರದು. ಮಂಡ್ಯ, ಮೈಸೂರು, ಬೆಂಗಳೂರಿಗೆ ಇದು ಜೀವನದಿ. ತಜ್ಞರು ಮಾತ್ರ ಈ ಬಗ್ಗೆ ಮಾತನಾಡಲು ಅಧಿಕಾರವಿದೆ. ಬೇರೆ ಯಾರೂ ಮಾತನಾಡಬಾರದು. ಅಣೆಕಟ್ಟು ವಿಚಾರ ಮುಂದಿಟ್ಟುಕೊಂಡು ಹಿಂದಿನ ಲೋಕಸಭೆ ಚುನಾವಣೆಯ ಪ್ರತೀಕಾರ ತೆಗೆದುಕೊಳ್ಳುವ ಕೆಲಸ ನಡೆದಿದೆ ಅಷ್ಟೇ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ‘ಕೆ.ಆರ್.ಎಸ್ ಅಣೆಕಟ್ಟುಸುರಕ್ಷಿತವಾಗಿದೆ. ಈ ಬಗ್ಗೆ ಗಣಿ ಇಲಾಖೆ ಸಚಿವರು ಮತ್ತು ಸಂಬಂಧಪಟ್ಟ ಎಂಜಿನಿಯರ್ಗಳಿಂದ ಮಾಹಿತಿ ಪಡೆಯಲಾಗಿದೆ. ಯಾವುದೇ ಅನುಮಾನ ಇದ್ದರೆ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕೆ ಹೊರತು, ಈ ವಿಚಾರವನ್ನು ದೊಡ್ಡವಿವಾದ ಮಾಡುವುದು ಬೇಡ‘ ಎಂದು ಕಂದಾಯ ಸಚಿವ ಆರ್.ಅಶೊಕ ಅವರು ಸಂಸದೆ ಸುಮಲತಾ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ರಾಜ್ಯಪಾಲಥಾವರಚಂದ್ ಗೆಹಲೋತ್ ಅವರನ್ನು ಬರಮಾಡಿಕೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕೆ.ಆರ್.ಎಸ್ ಅಣೆಕಟ್ಟು ಬಿರುಕು ಬಿಟ್ಟಿದೆ ಎನ್ನುವ ವಿಚಾರ ಕುರಿತು ಸರ್ಕಾರ ಏನನ್ನೂ ಹೇಳುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ. ಅಣೆಕಟ್ಟು ಸುರಕ್ಷಿತವಾಗಿದೆ. ಈ ಹಿಂದೆ ದುರಸ್ತಿ ಮಾಡಲಾಗಿದೆ.ಈ ಬಗ್ಗೆ ನೀರಾವರಿ ಇಲಾಖೆ ಎಂಜಿನಿಯರ್ಗಳು ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>’ಈ ವಿಷಯ ರಾಜಕೀಯ ದಾಳವಾಗಬಾರದು. ಯಾರ ಮನಸ್ಸಿಗೂ ನೋವುಂಟು ಮಾಡುವ ಕೆಲಸವಾಗಬಾರದು. ಮಂಡ್ಯ, ಮೈಸೂರು, ಬೆಂಗಳೂರಿಗೆ ಇದು ಜೀವನದಿ. ತಜ್ಞರು ಮಾತ್ರ ಈ ಬಗ್ಗೆ ಮಾತನಾಡಲು ಅಧಿಕಾರವಿದೆ. ಬೇರೆ ಯಾರೂ ಮಾತನಾಡಬಾರದು. ಅಣೆಕಟ್ಟು ವಿಚಾರ ಮುಂದಿಟ್ಟುಕೊಂಡು ಹಿಂದಿನ ಲೋಕಸಭೆ ಚುನಾವಣೆಯ ಪ್ರತೀಕಾರ ತೆಗೆದುಕೊಳ್ಳುವ ಕೆಲಸ ನಡೆದಿದೆ ಅಷ್ಟೇ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>