<p><strong>ಬೆಂಗಳೂರು:</strong> ಐಪಿಎಸ್ ಅಧಿಕಾರಿಯೊಬ್ಬರ ಬಗ್ಗೆ ಆಕ್ಷೇಪಾರ್ಹ ಬರಹಗಳಿರುವ ಕರಪತ್ರ ಹಂಚಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ ಸಂಚಾಲಕ ರವಿಕೃಷ್ಣಾ ರೆಡ್ಡಿ ಅವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು ಆನಂತರ ಬಿಡುಗಡೆ ಮಾಡಿದರು.</p>.<p>ಪೊಲೀಸ್ ಕಮಿಷನರ್ ಕಚೇರಿ ಎದುರು ಕರಪತ್ರಗಳನ್ನು ಹಂಚಿ, ಕಬ್ಬನ್ ಪಾರ್ಕ್ನಲ್ಲಿ ನಿಲ್ಲಿಸಿದ್ದ ತಮ್ಮ ಕಾರು ಹತ್ತಲು ರವಿ ಕೃಷ್ಣಾರೆಡ್ಡಿ ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಆನಂತರ ಅಶೋಕನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾ<br />ರಣೆ ನಡೆಸಿ ಬಿಡುಗಡೆ ಮಾಡಲಾಯಿತು.</p>.<p>ರವಿಕೃಷ್ಣಾರೆಡ್ಡಿ ಅವರ ಜತೆಗಿದ್ದ ರಘು ಜಾಣಗೆರೆ ಹಾಗೂ ವತ್ಸಲಾ ಅವರನ್ನೂ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. ರವಿ ಅವರನ್ನು ಪೊಲೀಸರು ಎಳೆದಾಡುವುದನ್ನು ವತ್ಸಲಾ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು. ಇದಕ್ಕೆ ಪೊಲೀಸರು ಆಕ್ಷೇಪಿಸಿದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.</p>.<p>ಪೊಲೀಸ್ ಅಧಿಕಾರಿ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಬರಹಗಳನ್ನು ಹಂಚದಂತೆ ಮತ್ತು ಮಾಧ್ಯಮಗಳಲ್ಲೂ ಈ ಬಗ್ಗೆ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ರವಿಕೃಷ್ಣಾರೆಡ್ಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ ಕ್ರಮವನ್ನು ಪೊಲೀಸರ ಕ್ರಮವನ್ನು ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡ ದೀಪಕ್ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಪಿಎಸ್ ಅಧಿಕಾರಿಯೊಬ್ಬರ ಬಗ್ಗೆ ಆಕ್ಷೇಪಾರ್ಹ ಬರಹಗಳಿರುವ ಕರಪತ್ರ ಹಂಚಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ ಸಂಚಾಲಕ ರವಿಕೃಷ್ಣಾ ರೆಡ್ಡಿ ಅವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು ಆನಂತರ ಬಿಡುಗಡೆ ಮಾಡಿದರು.</p>.<p>ಪೊಲೀಸ್ ಕಮಿಷನರ್ ಕಚೇರಿ ಎದುರು ಕರಪತ್ರಗಳನ್ನು ಹಂಚಿ, ಕಬ್ಬನ್ ಪಾರ್ಕ್ನಲ್ಲಿ ನಿಲ್ಲಿಸಿದ್ದ ತಮ್ಮ ಕಾರು ಹತ್ತಲು ರವಿ ಕೃಷ್ಣಾರೆಡ್ಡಿ ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಆನಂತರ ಅಶೋಕನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾ<br />ರಣೆ ನಡೆಸಿ ಬಿಡುಗಡೆ ಮಾಡಲಾಯಿತು.</p>.<p>ರವಿಕೃಷ್ಣಾರೆಡ್ಡಿ ಅವರ ಜತೆಗಿದ್ದ ರಘು ಜಾಣಗೆರೆ ಹಾಗೂ ವತ್ಸಲಾ ಅವರನ್ನೂ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. ರವಿ ಅವರನ್ನು ಪೊಲೀಸರು ಎಳೆದಾಡುವುದನ್ನು ವತ್ಸಲಾ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು. ಇದಕ್ಕೆ ಪೊಲೀಸರು ಆಕ್ಷೇಪಿಸಿದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.</p>.<p>ಪೊಲೀಸ್ ಅಧಿಕಾರಿ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಬರಹಗಳನ್ನು ಹಂಚದಂತೆ ಮತ್ತು ಮಾಧ್ಯಮಗಳಲ್ಲೂ ಈ ಬಗ್ಗೆ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ರವಿಕೃಷ್ಣಾರೆಡ್ಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ ಕ್ರಮವನ್ನು ಪೊಲೀಸರ ಕ್ರಮವನ್ನು ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡ ದೀಪಕ್ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>