<p><strong>ರಾಜರಾಜೇಶ್ವರಿ ನಗರ:</strong> ಸಹಕಾರ ಕ್ಷೇತ್ರದಲ್ಲಿ ರಾಜಕೀಯ ನುಸುಳುತ್ತಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ರಾಮೋಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ರಾಮೋಹಳ್ಳಿಯಿಂದ ಮುಕ್ತಿನಾಗ ದೇವಾಲಯವರೆಗೆ ಕೈಗೊಂಡಿರುವ ರಸ್ತೆ ಅಭಿವೃದ್ಧಿ, ಬಯಲುರಂಗ ಮಂದಿರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ಷೇತ್ರ ವ್ಯಾಪ್ತಿಯಲ್ಲಿ 100 ಕಿ.ಮೀ. ರಸ್ತೆ ಅಭಿವೃದ್ಧಿ, ಡಾಂಬರೀಕರಣ ಮಾಡಲು ನೀಲನಕ್ಷೆ ತಯಾರಾಗಿದೆ. ಗ್ರಾಮಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಸಿಮೆಂಟ್ ರಸ್ತೆ, ಎರಡು ಬದಿಯಲ್ಲಿ ಚರಂಡಿ ಮಾಡಲಾಗುತ್ತದೆ ಎಂದರು.</p>.<p>ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ವೇಣುಗೋಪಾಲ್ ಅಧ್ಯಕ್ಷತೆ ವಹಿಸಿ, ‘₹ 50 ಲಕ್ಷ ವೆಚ್ಚದಲ್ಲಿ ಕ್ಷೀರಭವನ ಹಾಗೂ ₹ 10 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಿಸಲಾಗುತ್ತಿದೆ’ ಎಂದರು. ಬಮೂಲ್ ನಿರ್ದೇಶಕ ಎಚ್.ಎಸ್.ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ಸಹಕಾರ ಕ್ಷೇತ್ರದಲ್ಲಿ ರಾಜಕೀಯ ನುಸುಳುತ್ತಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ರಾಮೋಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ರಾಮೋಹಳ್ಳಿಯಿಂದ ಮುಕ್ತಿನಾಗ ದೇವಾಲಯವರೆಗೆ ಕೈಗೊಂಡಿರುವ ರಸ್ತೆ ಅಭಿವೃದ್ಧಿ, ಬಯಲುರಂಗ ಮಂದಿರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ಷೇತ್ರ ವ್ಯಾಪ್ತಿಯಲ್ಲಿ 100 ಕಿ.ಮೀ. ರಸ್ತೆ ಅಭಿವೃದ್ಧಿ, ಡಾಂಬರೀಕರಣ ಮಾಡಲು ನೀಲನಕ್ಷೆ ತಯಾರಾಗಿದೆ. ಗ್ರಾಮಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಸಿಮೆಂಟ್ ರಸ್ತೆ, ಎರಡು ಬದಿಯಲ್ಲಿ ಚರಂಡಿ ಮಾಡಲಾಗುತ್ತದೆ ಎಂದರು.</p>.<p>ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ವೇಣುಗೋಪಾಲ್ ಅಧ್ಯಕ್ಷತೆ ವಹಿಸಿ, ‘₹ 50 ಲಕ್ಷ ವೆಚ್ಚದಲ್ಲಿ ಕ್ಷೀರಭವನ ಹಾಗೂ ₹ 10 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಿಸಲಾಗುತ್ತಿದೆ’ ಎಂದರು. ಬಮೂಲ್ ನಿರ್ದೇಶಕ ಎಚ್.ಎಸ್.ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>