<p><strong>ರಾಜರಾಜೇಶ್ವರಿನಗರ:</strong> ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಅನುಮತಿ ನೀಡಿರುವುದನ್ನು ವಿರೋಧಿಸಿ ಅಲ್ಲಿನ ನಾಗರಿಕರು ಅಬಕಾರಿ ಉಪ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಾಜ ಸೇವಕ ಎಚ್.ಡಿ.ಶಿವಲಿಂಗಯ್ಯ, ’ಯಾವುದೇ ಬಾರ್ ತೆರೆಯುವ ಮೊದಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಆದರೆ, ಚಿಕ್ಕಗೊಲ್ಲರಹಟ್ಟಿಯಲ್ಲಿ ಮಾಲೀಕರ ಒತ್ತಾಯಕ್ಕೆ ಮಣಿದು ಏಕಾಏಕಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲಾಗಿದೆ. ಈ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕೆ ಕೊಡಲಿ ಏಟು ನೀಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಾರ್ ತೆರೆಯಲು ಉದ್ದೇಶಿಸಿರುವ ಅಂಗಡಿಯ ಮುಂಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಇದೆ. ಶುದ್ಧ ನೀರಿನ ಘಟಕ, ಪಕ್ಕದಲ್ಲಿಯೇ ದೇವಸ್ಥಾನ, ಗಾರ್ಮೆಂಟ್ಸ್ ಕಾರ್ಖಾನೆ ಇದೆ. ಜನವಸತಿ ಪ್ರದೇಶದಲ್ಲಿ ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ಪರವಾನಗಿಯನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡ ತಮ್ಮಯ್ಯ, ‘ಬಾರ್ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಅಬಕಾರಿ ಸೂಪರಿಂಟೆಂಡೆಂಟ್ ಭರವಸೆ ನೀಡಿದ್ದರು. ಆದರೆ, ಬಳಿಕ ತರಾತುರಿಯಲ್ಲಿ ಅನುಮತಿ ನೀಡಿರುವುದು ಅಕ್ಷಮ್ಯ’ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸಿದ್ದಗಂಗಮ್ಮ ತಮ್ಮಯ್ಯ, ‘ಬಾರ್ ಆರಂಭವಾದರೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಲಿದೆ. ಪರಿಸರದಲ್ಲಿ ಗಲಾಟೆ ಹೆಚ್ಚಾಗಲಿದೆ. ಮಕ್ಕಳಿಗೆ ಪಾಠ ಕೇಳಲು ಆಗುವುದಿಲ್ಲ’ ಎಂದರು.</p>.<p>ಉಪ ಆಯುಕ್ತ ಡಾ.ಬಿ.ಆರ್.ಹಿರೇಮಠ ಪ್ರತಿಕ್ರಿಯಿಸಿ, ‘ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ತೆರೆಯಲು ಜೂನ್ 30ರಂದು ಅನುಮತಿ ನೀಡಲಾಗಿತ್ತು. ಬಾರ್ಗೆ ಅನುಮತಿ ನೀಡಬಾರದು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲಿ ನೀಡಿರುವ ಅನುಮತಿ ರದ್ದುಪಡಿಸಿ ಬೇರೆ ಜಾಗದಲ್ಲಿ ಬಾರ್ ತೆರೆಯಲು ಅನುಮತಿ ನೀಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಅನುಮತಿ ನೀಡಿರುವುದನ್ನು ವಿರೋಧಿಸಿ ಅಲ್ಲಿನ ನಾಗರಿಕರು ಅಬಕಾರಿ ಉಪ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಾಜ ಸೇವಕ ಎಚ್.ಡಿ.ಶಿವಲಿಂಗಯ್ಯ, ’ಯಾವುದೇ ಬಾರ್ ತೆರೆಯುವ ಮೊದಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಆದರೆ, ಚಿಕ್ಕಗೊಲ್ಲರಹಟ್ಟಿಯಲ್ಲಿ ಮಾಲೀಕರ ಒತ್ತಾಯಕ್ಕೆ ಮಣಿದು ಏಕಾಏಕಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲಾಗಿದೆ. ಈ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕೆ ಕೊಡಲಿ ಏಟು ನೀಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಾರ್ ತೆರೆಯಲು ಉದ್ದೇಶಿಸಿರುವ ಅಂಗಡಿಯ ಮುಂಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಇದೆ. ಶುದ್ಧ ನೀರಿನ ಘಟಕ, ಪಕ್ಕದಲ್ಲಿಯೇ ದೇವಸ್ಥಾನ, ಗಾರ್ಮೆಂಟ್ಸ್ ಕಾರ್ಖಾನೆ ಇದೆ. ಜನವಸತಿ ಪ್ರದೇಶದಲ್ಲಿ ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ಪರವಾನಗಿಯನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡ ತಮ್ಮಯ್ಯ, ‘ಬಾರ್ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಅಬಕಾರಿ ಸೂಪರಿಂಟೆಂಡೆಂಟ್ ಭರವಸೆ ನೀಡಿದ್ದರು. ಆದರೆ, ಬಳಿಕ ತರಾತುರಿಯಲ್ಲಿ ಅನುಮತಿ ನೀಡಿರುವುದು ಅಕ್ಷಮ್ಯ’ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸಿದ್ದಗಂಗಮ್ಮ ತಮ್ಮಯ್ಯ, ‘ಬಾರ್ ಆರಂಭವಾದರೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಲಿದೆ. ಪರಿಸರದಲ್ಲಿ ಗಲಾಟೆ ಹೆಚ್ಚಾಗಲಿದೆ. ಮಕ್ಕಳಿಗೆ ಪಾಠ ಕೇಳಲು ಆಗುವುದಿಲ್ಲ’ ಎಂದರು.</p>.<p>ಉಪ ಆಯುಕ್ತ ಡಾ.ಬಿ.ಆರ್.ಹಿರೇಮಠ ಪ್ರತಿಕ್ರಿಯಿಸಿ, ‘ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ತೆರೆಯಲು ಜೂನ್ 30ರಂದು ಅನುಮತಿ ನೀಡಲಾಗಿತ್ತು. ಬಾರ್ಗೆ ಅನುಮತಿ ನೀಡಬಾರದು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲಿ ನೀಡಿರುವ ಅನುಮತಿ ರದ್ದುಪಡಿಸಿ ಬೇರೆ ಜಾಗದಲ್ಲಿ ಬಾರ್ ತೆರೆಯಲು ಅನುಮತಿ ನೀಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>