<p><strong>ಬೆಂಗಳೂರು:</strong> ‘ಕೋವಿಡ್ನಿಂದ ಸಾವಿರಾರು ಜನ ಮೃತಪಟ್ಟಿದ್ದಾರೆ. ಅವರ ನೆರವಿಗೆ ಕೇಂದ್ರ ಮತ್ತು ರಾಜ್ಯಸರ್ಕಾರ ಧಾವಿಸುತ್ತಿಲ್ಲ. ಬದಲಾಗಿ ಬಿಜೆಪಿಯು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಜನರನ್ನು ವಂಚಿಸುತ್ತಿದೆ’ ಎಂದು ಸಂಸದ ಡಿ.ಕೆ. ಸುರೇಶ್ ದೂರಿದರು.</p>.<p>ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮೂರುಸಾವಿರ ಕುಟುಂಬಗಳಿಗೆ ನೀಡಿದ ದಿನಸಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>‘ಯುಪಿಎ ಸರ್ಕಾರವಿದ್ದಾಗ ಡಾ. ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ವಿಪತ್ತು ಯೋಜನೆಯಲ್ಲಿ ತಲಾ ₹4ಲಕ್ಷ ನೀಡಲು ಹಣವಿಟ್ಟಿದ್ದರು. ನರೇಂದ್ರ ಮೋದಿ ಅವರು ಆ ಹಣವನ್ನು ಕೊಡದೆ ಸತಾಯಿಸುತ್ತಿದ್ದರು. ನ್ಯಾಯಾಲಯ ಮಧ್ಯ ಪ್ರವೇಶಿಸಿ, ಮೃತರ ಕುಟುಂಬಕ್ಕೆ ತಲಾ ₹1ಲಕ್ಷ ಕೊಡುವಂತೆ ಆದೇಶ ನೀಡಿದೆ. ಆದರೆ, ಈವರೆಗೂ ಆ ಹಣವೂ ಸಂದಾಯವಾಗಿಲ್ಲ’ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ನಾಯಕಿ ಕುಸುಮಾ, ‘ಸಂಕಷ್ಟದ ಸಂದರ್ಭದಲ್ಲಿದ್ದ ಜನಸಾಮಾನ್ಯರು, ಬಡವರು, ನೊಂದವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿರಾರು ಕುಟುಂಬಗಳಿಗೆ ದಿನಸಿ ಕಿಟ್, ಔಷಧಿ ವಿತರಿಸಲಾಗಿದೆ’ ಎಂದರು.</p>.<p>ಮುಖಂಡ ಹನುಮಂತರಾಯಪ್ಪ, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಕೆ.ಆರ್.ಪಾರ್ಥಗೌಡ, ಹನುಮೇಗೌಡ, ಎ. ಅಮರನಾಥ್, ಕೃಷ್ಣ, ಭಾಗ್ಯಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ನಿಂದ ಸಾವಿರಾರು ಜನ ಮೃತಪಟ್ಟಿದ್ದಾರೆ. ಅವರ ನೆರವಿಗೆ ಕೇಂದ್ರ ಮತ್ತು ರಾಜ್ಯಸರ್ಕಾರ ಧಾವಿಸುತ್ತಿಲ್ಲ. ಬದಲಾಗಿ ಬಿಜೆಪಿಯು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಜನರನ್ನು ವಂಚಿಸುತ್ತಿದೆ’ ಎಂದು ಸಂಸದ ಡಿ.ಕೆ. ಸುರೇಶ್ ದೂರಿದರು.</p>.<p>ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮೂರುಸಾವಿರ ಕುಟುಂಬಗಳಿಗೆ ನೀಡಿದ ದಿನಸಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>‘ಯುಪಿಎ ಸರ್ಕಾರವಿದ್ದಾಗ ಡಾ. ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ವಿಪತ್ತು ಯೋಜನೆಯಲ್ಲಿ ತಲಾ ₹4ಲಕ್ಷ ನೀಡಲು ಹಣವಿಟ್ಟಿದ್ದರು. ನರೇಂದ್ರ ಮೋದಿ ಅವರು ಆ ಹಣವನ್ನು ಕೊಡದೆ ಸತಾಯಿಸುತ್ತಿದ್ದರು. ನ್ಯಾಯಾಲಯ ಮಧ್ಯ ಪ್ರವೇಶಿಸಿ, ಮೃತರ ಕುಟುಂಬಕ್ಕೆ ತಲಾ ₹1ಲಕ್ಷ ಕೊಡುವಂತೆ ಆದೇಶ ನೀಡಿದೆ. ಆದರೆ, ಈವರೆಗೂ ಆ ಹಣವೂ ಸಂದಾಯವಾಗಿಲ್ಲ’ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ನಾಯಕಿ ಕುಸುಮಾ, ‘ಸಂಕಷ್ಟದ ಸಂದರ್ಭದಲ್ಲಿದ್ದ ಜನಸಾಮಾನ್ಯರು, ಬಡವರು, ನೊಂದವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿರಾರು ಕುಟುಂಬಗಳಿಗೆ ದಿನಸಿ ಕಿಟ್, ಔಷಧಿ ವಿತರಿಸಲಾಗಿದೆ’ ಎಂದರು.</p>.<p>ಮುಖಂಡ ಹನುಮಂತರಾಯಪ್ಪ, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಕೆ.ಆರ್.ಪಾರ್ಥಗೌಡ, ಹನುಮೇಗೌಡ, ಎ. ಅಮರನಾಥ್, ಕೃಷ್ಣ, ಭಾಗ್ಯಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>