ರಾಜರಾಜೇಶ್ವರಿನಗರ: ‘ಉತ್ತರಹಳ್ಳಿ ಕ್ಷೇತ್ರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದಾಗ ಯಾವುದೇ ಮೂಲಸೌಲಭ್ಯಗಳಿರಲಿಲ್ಲ. ಅಭಿವೃದ್ಧಿಯಿಂದ ವಂಚಿತವಾಗಿತ್ತು. ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು’ ಎಂದು ತೋಟಗಾರಿಕೆ ಸಚಿವ, ಕ್ಷೇತ್ರದ ಶಾಸಕ ಮುನಿರತ್ನ ಹೇಳಿದರು.