<p><strong>ರಾಜರಾಜೇಶ್ವರಿನಗರ:</strong> ‘ಉತ್ತರಹಳ್ಳಿ ಕ್ಷೇತ್ರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದಾಗ ಯಾವುದೇ ಮೂಲಸೌಲಭ್ಯಗಳಿರಲಿಲ್ಲ. ಅಭಿವೃದ್ಧಿಯಿಂದ ವಂಚಿತವಾಗಿತ್ತು. ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು’ ಎಂದು ತೋಟಗಾರಿಕೆ ಸಚಿವ, ಕ್ಷೇತ್ರದ ಶಾಸಕ ಮುನಿರತ್ನ ಹೇಳಿದರು.</p>.<p>ಯಶವಂತಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಮೊದಲ ಬಾರಿ ಶಾಸಕನಾಗಿ ಅಭಿವೃದ್ದಿ ಕೆಲಸಮಾಡಲು ನೂರಾರು ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದರಿಂದ ಜನಪ್ರಿಯತೆ ಸಿಗಲು ಸಾಧ್ಯವಾಯಿತು’ ಎಂದರು.</p>.<p>ಬಿಜೆಪಿ ಮುಖಂಡ ಜಿ.ಕೆ.ವೆಂಕಟೇಶ್, ‘ಮುನಿರತ್ನ ಅವರು ಅಭಿವೃದ್ಧಿ ಕೆಲಸದ ಜೊತೆಗೆ ಬಡವರು, ಶೋಷಿತ ಜನಾಂಗದ ಪರವಾಗಿ ನಿಂತಿರುವುದರಿಂದ ನಾಯಕತ್ವ ಬೆಳೆಸಿಕೊಂಡು ಅಭಿವೃದ್ಧಿ ಕೆಲಸಮಾಡಲು ಸಾಧ್ಯವಾಯಿತು’ ಎಂದರು.</p>.<p>ಬಿಜೆಪಿ ಮುಖಂಡ ವೇಲುನಾಯ್ಕರ್, ‘ಮುನಿರತ್ನ ಅವರು ನೂರಾರು ಜನರಿಗೆ ವಸತಿ ಕಲ್ಪಿಸಿಕೊಟ್ಟಿದರಿಂದ ನಾಗರಿಕರು ಅವರ ನಾಯಕತ್ವ ಗುರುತಿಸಿ ಅತ್ಯಧಿಕ ಮತಗಳಿಂದ ಶಾಸಕರಾಗಿ ಪುನರಾಯ್ಕೆ ಮಾಡಿದ್ದಾರೆ’ ಎಂದು ಪ್ರಶಂಸಿಸಿದರು.</p>.<p>ನೂರಾರು ಜನ ಕಾರ್ಯಕ್ರಮದಲ್ಲಿ ಸೇರಿದ್ದರು. ಅಂತರ ಕಾಯ್ದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ಉತ್ತರಹಳ್ಳಿ ಕ್ಷೇತ್ರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದಾಗ ಯಾವುದೇ ಮೂಲಸೌಲಭ್ಯಗಳಿರಲಿಲ್ಲ. ಅಭಿವೃದ್ಧಿಯಿಂದ ವಂಚಿತವಾಗಿತ್ತು. ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು’ ಎಂದು ತೋಟಗಾರಿಕೆ ಸಚಿವ, ಕ್ಷೇತ್ರದ ಶಾಸಕ ಮುನಿರತ್ನ ಹೇಳಿದರು.</p>.<p>ಯಶವಂತಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಮೊದಲ ಬಾರಿ ಶಾಸಕನಾಗಿ ಅಭಿವೃದ್ದಿ ಕೆಲಸಮಾಡಲು ನೂರಾರು ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದರಿಂದ ಜನಪ್ರಿಯತೆ ಸಿಗಲು ಸಾಧ್ಯವಾಯಿತು’ ಎಂದರು.</p>.<p>ಬಿಜೆಪಿ ಮುಖಂಡ ಜಿ.ಕೆ.ವೆಂಕಟೇಶ್, ‘ಮುನಿರತ್ನ ಅವರು ಅಭಿವೃದ್ಧಿ ಕೆಲಸದ ಜೊತೆಗೆ ಬಡವರು, ಶೋಷಿತ ಜನಾಂಗದ ಪರವಾಗಿ ನಿಂತಿರುವುದರಿಂದ ನಾಯಕತ್ವ ಬೆಳೆಸಿಕೊಂಡು ಅಭಿವೃದ್ಧಿ ಕೆಲಸಮಾಡಲು ಸಾಧ್ಯವಾಯಿತು’ ಎಂದರು.</p>.<p>ಬಿಜೆಪಿ ಮುಖಂಡ ವೇಲುನಾಯ್ಕರ್, ‘ಮುನಿರತ್ನ ಅವರು ನೂರಾರು ಜನರಿಗೆ ವಸತಿ ಕಲ್ಪಿಸಿಕೊಟ್ಟಿದರಿಂದ ನಾಗರಿಕರು ಅವರ ನಾಯಕತ್ವ ಗುರುತಿಸಿ ಅತ್ಯಧಿಕ ಮತಗಳಿಂದ ಶಾಸಕರಾಗಿ ಪುನರಾಯ್ಕೆ ಮಾಡಿದ್ದಾರೆ’ ಎಂದು ಪ್ರಶಂಸಿಸಿದರು.</p>.<p>ನೂರಾರು ಜನ ಕಾರ್ಯಕ್ರಮದಲ್ಲಿ ಸೇರಿದ್ದರು. ಅಂತರ ಕಾಯ್ದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>