<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ರೇಬಿಸ್ ನಿರ್ಮೂಲನೆಗಾಗಿ ಪ್ರತ್ಯೇಕ ವಾಹನದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದರು.</p>.<p>‘ವಿಶ್ವ ಝೂನೋಸಿಸ್’ ದಿನದ ಭಾಗವಾಗಿ ರೇಬಿಸ್ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಜಾಗೃತಿ ಮೂಡಿಸುವ ವಾಹನಕ್ಕೆ ಸೋಮವಾರ ಅವರು ಚಾಲನೆ ನೀಡಿದರು.</p>.<p>ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ವಾಹನ ಸಂಚರಿಸುವುದರ ಜೊತೆಗೆ ಪಾಲಿಕೆ, ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ತೆರಳುತ್ತದೆ. ರೇಬಿಸ್ ರೋಗ ನಿಯಂತ್ರಣದ ಕುರಿತು ಮಕ್ಕಳಲ್ಲಿ ಸಿಬ್ಬಂದಿ ಜಾಗೃತಿ ಮೂಡಿಸಲಿದ್ದಾರೆ ಎಂದರು.</p>.<p>ಬಿಬಿಎಂಪಿಯ ಪಶುವೈದ್ಯಕೀಯ ಮಹಾವಿದ್ಯಾಲಯ- ಡಬ್ಲ್ಯುಒಎಎಚ್ ರೆಫೆರೆನ್ಸ್ ರೇಬಿಸ್ ರೋಗನಿರ್ಣಯ ಪ್ರಯೋಗಾಲಯ, ಚಾರ್ಲೀʼಸ್ ಮತ್ತು ಡಬ್ಲ್ಯುವಿಎಸ್- ಮಿಷನ್ ರೇಬಿಸ್ ಸಂಸ್ಥೆಗಳ ಜೊತೆಯಲ್ಲಿ 2030ರ ವೇಳೆಗೆ ಬೆಂಗಳೂರು ನಗರವನ್ನು ರೇಬಿಸ್ ಮುಕ್ತಗೊಳಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾ ಡಾ. ಚಂದ್ರಯ್ಯ, ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್ ಮದನಿ, ಚಾರ್ಲೀʼಸ್ ರೆಸ್ಕ್ಯೂ ಸಂಸ್ಥೆಯ ಸ್ಥಾಪಕ ಟ್ರಸ್ಟಿ ಸುಧಾ ನಾರಾಯಣನ್, ಮಿಷನ್ ರೇಬಿಸ್ ಸಂಸ್ಥೆಯ ನಿರ್ದೇಶಕ ಡಾ. ಬಾಲಾಜಿ ಚಂದ್ರಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ರೇಬಿಸ್ ನಿರ್ಮೂಲನೆಗಾಗಿ ಪ್ರತ್ಯೇಕ ವಾಹನದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದರು.</p>.<p>‘ವಿಶ್ವ ಝೂನೋಸಿಸ್’ ದಿನದ ಭಾಗವಾಗಿ ರೇಬಿಸ್ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಜಾಗೃತಿ ಮೂಡಿಸುವ ವಾಹನಕ್ಕೆ ಸೋಮವಾರ ಅವರು ಚಾಲನೆ ನೀಡಿದರು.</p>.<p>ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ವಾಹನ ಸಂಚರಿಸುವುದರ ಜೊತೆಗೆ ಪಾಲಿಕೆ, ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ತೆರಳುತ್ತದೆ. ರೇಬಿಸ್ ರೋಗ ನಿಯಂತ್ರಣದ ಕುರಿತು ಮಕ್ಕಳಲ್ಲಿ ಸಿಬ್ಬಂದಿ ಜಾಗೃತಿ ಮೂಡಿಸಲಿದ್ದಾರೆ ಎಂದರು.</p>.<p>ಬಿಬಿಎಂಪಿಯ ಪಶುವೈದ್ಯಕೀಯ ಮಹಾವಿದ್ಯಾಲಯ- ಡಬ್ಲ್ಯುಒಎಎಚ್ ರೆಫೆರೆನ್ಸ್ ರೇಬಿಸ್ ರೋಗನಿರ್ಣಯ ಪ್ರಯೋಗಾಲಯ, ಚಾರ್ಲೀʼಸ್ ಮತ್ತು ಡಬ್ಲ್ಯುವಿಎಸ್- ಮಿಷನ್ ರೇಬಿಸ್ ಸಂಸ್ಥೆಗಳ ಜೊತೆಯಲ್ಲಿ 2030ರ ವೇಳೆಗೆ ಬೆಂಗಳೂರು ನಗರವನ್ನು ರೇಬಿಸ್ ಮುಕ್ತಗೊಳಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾ ಡಾ. ಚಂದ್ರಯ್ಯ, ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್ ಮದನಿ, ಚಾರ್ಲೀʼಸ್ ರೆಸ್ಕ್ಯೂ ಸಂಸ್ಥೆಯ ಸ್ಥಾಪಕ ಟ್ರಸ್ಟಿ ಸುಧಾ ನಾರಾಯಣನ್, ಮಿಷನ್ ರೇಬಿಸ್ ಸಂಸ್ಥೆಯ ನಿರ್ದೇಶಕ ಡಾ. ಬಾಲಾಜಿ ಚಂದ್ರಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>