‘ಇಡ್ಲಿ, ಚಿತ್ರಾನ್ನ, ಪುಲಾವ್, ಮೊಸರನ್ನ, ತರಕಾರಿ ಬಾತ್, ಉಪ್ಪಿಟ್ಟು, ಕೇಸರಿಬಾತ್ ನಮ್ಮಲ್ಲಿ ವಿಶೇಷ. ಬಡವರ ಹೊಟ್ಟೆ ಹಸಿವು ನೀಗಿಸಬೇಕು ಎಂಬ ಉದ್ದೇಶದಿಂದ ಆರಂಭಿಸಲಾಗಿದೆ. ನಗರ ಪ್ರದೇಶದಲ್ಲಿ ಬೇಡಿಕೆ ಹೆಚ್ಚಿದಂತೆ ಮತ್ತು ಬಡವರು ವಾಸಿಸುವ ಪ್ರದೇಶಗಳಲ್ಲಿ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ರಾಧಾಕೃಷ್ಣ ಫುಡ್ ಕ್ಯಾಂಟೀನ್ ವತಿಯಿಂದ 5ಕ್ಕೂ ಹೆಚ್ಚು ಅನಾಥ ಮಕ್ಕಳ ಶಾಲೆಯ ನೂರಾರು ವಿದ್ಯಾರ್ಥಿಗಳಿಗೆ ಹಾಗೂ ವೃದ್ಧಾಶ್ರಮಕ್ಕೆ ಉಚಿತವಾಗಿ ಪ್ರತಿದಿನ ತಿಂಡಿ
ವಿತರಿಸಲಾಗುತ್ತಿದೆ’ ಎಂದು ವಿವರಿಸಿದ್ದಾರೆ.