‘ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದ ರಾಮಕೃಷ್ಣ ರಾಜಕೀಯ ವ್ಯಕ್ತಿ. ರಾಮಕೃಷ್ಣ ಮತ್ತು ಇತರ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ತನಿಖಾಧಿಕಾರಿ ಕೂಡಲೇ ವರದಿ ಸಲ್ಲಿಸಬೇಕು. ಆರೋಪಿಗಳನ್ನು ಪತ್ತೆ ಹಚ್ಚಲು ತನಿಖಾಧಿಕಾರಿಯಿಂದ ಸಾಧ್ಯವಾಗದಿದ್ದರೆ ಅವರನ್ನು ಬದಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಪೀಠ ತಿಳಿಸಿತು.