ಬೆಂಗಳೂರು: ರೈಲು ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕೊರತೆ ಬಗ್ಗೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳನ್ನು ರೈಲ್ವೆ ಮಂಡಳಿ ಪ್ರಶ್ನೆ ಮಾಡಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಮೂವರು ಸದಸ್ಯರೊಂದಿಗೆ ಬುಧವಾರ ಭೇಟಿ ನೀಡಿದ್ದ ರೈಲ್ವೆ ಮಂಡಳಿಯ ಪ್ರಯಾಣಿಕರ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಚಂದ್ರರತ್ನ ಪರಿಶೀಲನೆ ನಡೆಸಿದರು.
‘ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಡೆ ಇರಬೇಕು. ಆದರೆ,ಕಂಟೋನ್ಮೆಂಟ್ ರೈಲು ನಿಲ್ದಾಣದ ಕೆಲವೆಡೆ ಇಲ್ಲ ಏಕೆ’ ಎಂದು ಪ್ರಶ್ನಿಸಿದರು. ‘ಸಮಸ್ಯೆಯನ್ನು ಕೂಡಲೇ ಸರಿಪಡಿಸಿ’ ಎಂದು ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.