ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಎರಡನೇ ದರ್ಜೆಯ ಬೋಗಿಗಳ (ಜಿ.ಎಸ್ ಕೋಚ್) ರೈಲುಗಳನ್ನು ಪರಿವರ್ತನೆ ಮಾಡಿ, ಟೊಮೆಟೊ ಸಾಗಣೆಗೆ ಬಳಕೆ ಮಾಡಲು ಉದ್ದೇಶಿಸಲಾಗಿದೆ. ಕನಿಷ್ಠ ಹತ್ತು ಬೋಗಿಗಳನ್ನು ಬಳಸಲು ರೈಲ್ವೆ ಮಂಡಳಿ ಅವಕಾಶ ನೀಡಿದ್ದು, ಒಂದು ಶೈತ್ಯಾಗಾರವನ್ನೂ ಒಳಗೊಂಡ 15 ಬೋಗಿಗಳನ್ನು ಪ್ರಾಯೋಗಿಕವಾಗಿ ಈ ಯೋಜನೆಗೆ ಪರಿಚಯಿಸಲು ನಿರ್ಧರಿಸಲಾಗಿದೆ. ಮುಂದಿನ ವಾರದಲ್ಲಿ ಟೊಮೆಟೊ ಸಾಗಿಸುವ ಕಾರ್ಯ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾ ಶನಿವಾರ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.