ವಿನೋದ್ ಜಿ. ಕುಲಕರ್ಣಿ ವಾದ ಆಲಿಸಿದ ನ್ಯಾಯಪೀಠ, ’ಪ್ರಯಾಣ ದರದಲ್ಲಿ ರಿಯಾಯಿತಿ ಅಥವಾ ವಿನಾಯಿತಿ ನೀಡುವುದು ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟ ವಿಷಯ. ಇದರಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡಲು ಅಥವಾ ಮಧ್ಯಪ್ರವೇಶಿಸಲು ಬರುವುದಿಲ್ಲ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದರ ಬದಲಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲಭ್ಯವಿರುವ ಅಸ್ತ್ರಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ‘ ಎಂದು ಅರ್ಜಿದಾರರಿಗೆ ಸೂಚಿಸಿತು.