ಬೆಂಗಳೂರು: ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ರೈಲ್ವೆ ಪೊಲೀಸರು, ₹ 80 ಸಾವಿರ ಮೌಲ್ಯದ 8 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಒಡಿಶಾದ ಬಸಂತ್ (28) ಹಾಗೂ ಹಲಸೂರಿನ ಮೌನೇಶ್ವರ ಬಂಧಿತರು. ಅವರಿಬ್ಬರ ವಿರುದ್ಧ ಮಾದಕವಸ್ತು ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿ ಪ್ರಕರಣ ದಾಖಲಾಗಿದೆ.
‘ಕೆಲವರು ರೈಲಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಬಗ್ಗೆ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದರು. ಆ ಬಗ್ಗೆ ನಗರದ ಎಲ್ಲ ನಿಲ್ದಾಣಗಳ ಪೊಲೀಸರಿಗೆ ಸಂದೇಶ ರವಾನಿಸಲಾಗಿತ್ತು.ಕಂಟ್ಮೊನೆಂಟ್ ನಿಲ್ದಾಣಕ್ಕೆ ಬಂದಿಳಿದಿದ್ದ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದರು’ ಎಂದು ಮೂಲಗಳು ಹೇಳಿವೆ.