ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಲ್ಲಿ ಗಾಂಜಾ ಸಾಗಣೆ: ಮೂವರ ಬಂಧನ

Last Updated 21 ಫೆಬ್ರುವರಿ 2022, 15:51 IST
ಅಕ್ಷರ ಗಾತ್ರ

ಬೆಂಗಳೂರು: ತ್ರಿಪುರಾದಿಂದ ರೈಲಿನ ಮೂಲಕ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಮೂವರು ಆರೋಪಿಗಳನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.

'ತ್ರಿಪುರಾದ ಜಾವೀದ್ ಹುಸೇನ್ (23), ಮುಸ್ಸಾಮೀಯಾ (23) ಹಾಗೂ ಅಬ್ದುಲ್ ಮುಸ್ನಾದ್ (22) ಬಂಧಿತರು. ಇವರಿಂದ 15 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿಗಳು, ಭದ್ರತಾ ಏಜೆನ್ಸಿಗಳಿಗೆ ಸೇರಿದ್ದರು. ಖಾಸಗಿ ಕಂಪನಿ ಹಾಗೂ ವಿವಿಧ ಅಪಾರ್ಟ್‌ಮೆಂಟ್ ಸಮುಚ್ಚಯಗಳಲ್ಲಿ ಭದ್ರತೆಗೆ ಆರೋಪಿಗಳನ್ನು ನಿಯೋಜಿಸಲಾಗುತ್ತಿತ್ತು. ಭದ್ರತಾ ಕೆಲಸದ ಜೊತೆಯಲ್ಲೇ ಆರೋಪಿಗಳು, ಗಾಂಜಾ ಮಾರಿ ಹಣ ಸಂಪಾದಿಸುತ್ತಿದ್ದರು’ ಎಂದೂ ತಿಳಿಸಿದರು.

‘ಆರೋಪಿಗಳು ತ್ರಿಪುರಾಗೆ ಆಗಾಗ ರೈಲಿನಲ್ಲಿ ಹೋಗಿ ಬರುತ್ತಿದ್ದರು. ಗಾಂಜಾ ಪೊಟ್ಟಣಗಳನ್ನು ಬ್ಯಾಗ್‌ನಲ್ಲಿರಿಸಿಕೊಂಡು ನಗರಕ್ಕೆ ತರುತ್ತಿದ್ದರು. ಪರಿಚಯಸ್ಥರ ಮೂಲಕ ಗಾಂಜಾವನ್ನು ಗ್ರಾಹಕರಿಗೆ ಮಾರುತ್ತಿದ್ದರೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.

‘ಶ್ರೀರಾಮಪುರ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಆರೋಪಿಗಳು ಗಾಂಜಾ ಸಾಗಿಸುತ್ತಿದ್ದರು. ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT