<p><strong>ಬೆಂಗಳೂರು</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ರೈಲು ಸಂಪರ್ಕ ಕಲ್ಪಿಸಬೇಕು ಎಂಬ ಬಹುದಿನಗಳ ಕನಸು ನನಸಾಗುವ ಕಾಲ ಕಡೆಗೂ ಸನ್ನಿಹಿತವಾಗಿದೆ. ರೈಲು ನಿಲುಗಡೆ ತಾಣದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಸೆಪ್ಟೆಂಬರ್ನಲ್ಲಿ ನಿಲ್ದಾಣ ಕಾರ್ಯಾರಂಭ ಮಾಡಲಿದೆ.</p>.<p>‘ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ನೀಡುತ್ತಿರುವ ಕೊಡುಗೆ ಇದಾಗಿದೆ’ ಎಂದುರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.</p>.<p>‘ಬಾಕಿ ಇರುವ ಸಣ್ಣಪುಟ್ಟ ಕೆಲಸ ಮುಂದಿನ ತಿಂಗಳ ವೇಳೆಗೆ ಪೂರ್ಣಗೊಳ್ಳಲಿದ್ದು, ಪ್ರಯಾಣಿಕ ರೈಲುಗಳ ಸಂಚಾರ ಆರಂಭವಾದ ಕೂಡಲೇ ಈ ನಿಲ್ದಾಣ ಕೂಡ ಕಾರ್ಯಾರಂಭಗೊಳ್ಳಲಿದೆ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೇವನಹಳ್ಳಿ ಮತ್ತು ದೊಡ್ಡಜಾಲ ನಡುವೆ ಇರುವ ಈ ರೈಲು ನಿಲ್ದಾಣವು, ವಿಮಾನ ನಿಲ್ದಾಣದ ಕ್ಯಾಂಪಸ್ಗೆ ಹೊಂದಿಕೊಂಡಂತೆಯೇ ಇದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣದಿಂದ ಈ ನಿಲ್ದಾಣಕ್ಕೆ 30ರಿಂದ 35 ನಿಮಿಷದಲ್ಲಿ ಪ್ರಯಾಣ ಮಾಡಬಹುದು. ಅಲ್ಲದೇ ₹30 ದರದಲ್ಲೇ ವಿಮಾನ ನಿಲ್ದಾಣಕ್ಕೆ ತಲುಪಬಹುದು.</p>.<p>ವಿಮಾನ ಪ್ರಯಾಣಿಕರು ಮತ್ತು ನಿಲ್ದಾಣ ಉದ್ಯೋಗಿಗಳು ಬಿಎಂಟಿಸಿ ಬಸ್ ಮತ್ತು ದುಬಾರಿ ವೆಚ್ಚದ ಕ್ಯಾಬ್ಗಳನ್ನು ಅವಲಂಬಿಸಿದ್ದಾರೆ. ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಬಿಎಂಟಿಸಿ ‘ವಜ್ರವಾಯು’ ಬಸ್ ಪ್ರಯಾಣ ದರ ₹235 ಇದೆ. ಕನಿಷ್ಠ ಒಂದು ಗಂಟೆಯಾದರೂ ಸಮಯ ಬೇಕಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೂ ಹೊಸ ರೈಲು ನಿಲ್ದಾಣ ಪರಿಹಾರ ನೀಡಲಿದೆ.</p>.<p>‘₹3 ಕೋಟಿ ಮೊತ್ತದ ಯೋಜನೆಯ ಸಂಪೂರ್ಣ ವೆಚ್ಚವನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಭರಿಸಿದೆ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದರು.</p>.<p>‘ಈ ಮಾರ್ಗದಲ್ಲಿ ಸದ್ಯ ಸಂಚರಿಸುತ್ತಿರುವ ಎಲ್ಲಾ 6 ರೈಲುಗಳ ನಿಲುಗಡೆಗೂ ಅವಕಾಶ ನೀಡಲಾಗುವುದು. ಜನರ ಪ್ರತಿಕ್ರಿಯೆ ಆಧರಿಸಿ ರೈಲುಗಳ ಸಂಖ್ಯೆ ಹೆಚ್ಚಿಸಲಾಗುವುದು’ ಎಂದು ಹೇಳಿದರು.</p>.<p>‘ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ 3.5 ಕಿಲೋ ಮೀಟರ್ ದೂರವಿದೆ. ಪ್ರಯಾಣಿಕರ ಸಂಚಾರಕ್ಕೆ ಬಿಐಎಎಲ್ ಸ್ವಂತ ಬಸ್ಗಳ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ. 8ರಿಂದ 15 ನಿಮಿಷದ ಹಾದಿ ಇದಾಗಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ರೈಲು ಸಂಪರ್ಕ ಕಲ್ಪಿಸಬೇಕು ಎಂಬ ಬಹುದಿನಗಳ ಕನಸು ನನಸಾಗುವ ಕಾಲ ಕಡೆಗೂ ಸನ್ನಿಹಿತವಾಗಿದೆ. ರೈಲು ನಿಲುಗಡೆ ತಾಣದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಸೆಪ್ಟೆಂಬರ್ನಲ್ಲಿ ನಿಲ್ದಾಣ ಕಾರ್ಯಾರಂಭ ಮಾಡಲಿದೆ.</p>.<p>‘ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ನೀಡುತ್ತಿರುವ ಕೊಡುಗೆ ಇದಾಗಿದೆ’ ಎಂದುರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.</p>.<p>‘ಬಾಕಿ ಇರುವ ಸಣ್ಣಪುಟ್ಟ ಕೆಲಸ ಮುಂದಿನ ತಿಂಗಳ ವೇಳೆಗೆ ಪೂರ್ಣಗೊಳ್ಳಲಿದ್ದು, ಪ್ರಯಾಣಿಕ ರೈಲುಗಳ ಸಂಚಾರ ಆರಂಭವಾದ ಕೂಡಲೇ ಈ ನಿಲ್ದಾಣ ಕೂಡ ಕಾರ್ಯಾರಂಭಗೊಳ್ಳಲಿದೆ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೇವನಹಳ್ಳಿ ಮತ್ತು ದೊಡ್ಡಜಾಲ ನಡುವೆ ಇರುವ ಈ ರೈಲು ನಿಲ್ದಾಣವು, ವಿಮಾನ ನಿಲ್ದಾಣದ ಕ್ಯಾಂಪಸ್ಗೆ ಹೊಂದಿಕೊಂಡಂತೆಯೇ ಇದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣದಿಂದ ಈ ನಿಲ್ದಾಣಕ್ಕೆ 30ರಿಂದ 35 ನಿಮಿಷದಲ್ಲಿ ಪ್ರಯಾಣ ಮಾಡಬಹುದು. ಅಲ್ಲದೇ ₹30 ದರದಲ್ಲೇ ವಿಮಾನ ನಿಲ್ದಾಣಕ್ಕೆ ತಲುಪಬಹುದು.</p>.<p>ವಿಮಾನ ಪ್ರಯಾಣಿಕರು ಮತ್ತು ನಿಲ್ದಾಣ ಉದ್ಯೋಗಿಗಳು ಬಿಎಂಟಿಸಿ ಬಸ್ ಮತ್ತು ದುಬಾರಿ ವೆಚ್ಚದ ಕ್ಯಾಬ್ಗಳನ್ನು ಅವಲಂಬಿಸಿದ್ದಾರೆ. ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಬಿಎಂಟಿಸಿ ‘ವಜ್ರವಾಯು’ ಬಸ್ ಪ್ರಯಾಣ ದರ ₹235 ಇದೆ. ಕನಿಷ್ಠ ಒಂದು ಗಂಟೆಯಾದರೂ ಸಮಯ ಬೇಕಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೂ ಹೊಸ ರೈಲು ನಿಲ್ದಾಣ ಪರಿಹಾರ ನೀಡಲಿದೆ.</p>.<p>‘₹3 ಕೋಟಿ ಮೊತ್ತದ ಯೋಜನೆಯ ಸಂಪೂರ್ಣ ವೆಚ್ಚವನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಭರಿಸಿದೆ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದರು.</p>.<p>‘ಈ ಮಾರ್ಗದಲ್ಲಿ ಸದ್ಯ ಸಂಚರಿಸುತ್ತಿರುವ ಎಲ್ಲಾ 6 ರೈಲುಗಳ ನಿಲುಗಡೆಗೂ ಅವಕಾಶ ನೀಡಲಾಗುವುದು. ಜನರ ಪ್ರತಿಕ್ರಿಯೆ ಆಧರಿಸಿ ರೈಲುಗಳ ಸಂಖ್ಯೆ ಹೆಚ್ಚಿಸಲಾಗುವುದು’ ಎಂದು ಹೇಳಿದರು.</p>.<p>‘ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ 3.5 ಕಿಲೋ ಮೀಟರ್ ದೂರವಿದೆ. ಪ್ರಯಾಣಿಕರ ಸಂಚಾರಕ್ಕೆ ಬಿಐಎಎಲ್ ಸ್ವಂತ ಬಸ್ಗಳ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ. 8ರಿಂದ 15 ನಿಮಿಷದ ಹಾದಿ ಇದಾಗಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>