<p><strong>ಬೆಂಗಳೂರು</strong>: ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಮತ್ತು ಬಚ್ಪನ್ ಬಚಾವೊ ಆಂದೋಲನ (ಬಿಬಿಎ) ವತಿಯಿಂದ ಸುರಕ್ಷಾ ಕ್ರಮಗಳ ಬಗ್ಗೆ ಮತ್ತು ರೈಲ್ವೆ ಹಳಿಗಳ ಸುತ್ತಲಿನ ನಿವಾಸಿಗಳ ಜವಾಬ್ದಾರಿ ಬಗ್ಗೆ ಹೆಬ್ಬಾಳ ರೈಲು ನಿಲ್ದಾಣದ ಬಳಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ಕೊಳೆಗೇರಿ ನಿವಾಸಿಗಳಲ್ಲಿ ಅರಿವು ಮೂಡಿಸುವುದು ಮತ್ತು ಅವರನ್ನು ತೊಡಗಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ನಿವಾಸಿಗಳು ಭಾಗವಹಿಸಿದ್ದರು. ರೈಲ್ವೆ ಹಳಿಗಳ ಬಳಿ ಅಸುರಕ್ಷಿತ ಅಭ್ಯಾಸಗಳಿಂದ ಅಪಾಯ ಉಂಟಾಗಲಿದೆ ಎಂದು ಅಧಿಕಾರಿಗಳು ತಿಳಿಸಿಕೊಟ್ಟರು.</p>.<p>ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವುದು, ಹಳಿಗಳ ಮೇಲೆ ಕಸ ಎಸೆಯುವುದು, ವಸ್ತುಗಳನ್ನು ಇಡುವುದು ಮುಂತಾದ ಚಟುವಟಿಕೆಗಳ ದುಷ್ಪರಿಣಾಮದ ಬಗ್ಗೆ ತಿಳಿಸಿಕೊಡಲಾಯಿತು. ಸಂಗೀತದೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸಂವಾದದ ಮೂಲಕ ಜಾಗೃತಿ ಮೂಡಿಸಲಾಯಿತು. ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ಕರಪತ್ರಗಳನ್ನು ವಿತರಿಸಲಾಯಿತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತ್ರಿನೇತ್ರ ಕೆ.ಆರ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಮತ್ತು ಬಚ್ಪನ್ ಬಚಾವೊ ಆಂದೋಲನ (ಬಿಬಿಎ) ವತಿಯಿಂದ ಸುರಕ್ಷಾ ಕ್ರಮಗಳ ಬಗ್ಗೆ ಮತ್ತು ರೈಲ್ವೆ ಹಳಿಗಳ ಸುತ್ತಲಿನ ನಿವಾಸಿಗಳ ಜವಾಬ್ದಾರಿ ಬಗ್ಗೆ ಹೆಬ್ಬಾಳ ರೈಲು ನಿಲ್ದಾಣದ ಬಳಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ಕೊಳೆಗೇರಿ ನಿವಾಸಿಗಳಲ್ಲಿ ಅರಿವು ಮೂಡಿಸುವುದು ಮತ್ತು ಅವರನ್ನು ತೊಡಗಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ನಿವಾಸಿಗಳು ಭಾಗವಹಿಸಿದ್ದರು. ರೈಲ್ವೆ ಹಳಿಗಳ ಬಳಿ ಅಸುರಕ್ಷಿತ ಅಭ್ಯಾಸಗಳಿಂದ ಅಪಾಯ ಉಂಟಾಗಲಿದೆ ಎಂದು ಅಧಿಕಾರಿಗಳು ತಿಳಿಸಿಕೊಟ್ಟರು.</p>.<p>ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವುದು, ಹಳಿಗಳ ಮೇಲೆ ಕಸ ಎಸೆಯುವುದು, ವಸ್ತುಗಳನ್ನು ಇಡುವುದು ಮುಂತಾದ ಚಟುವಟಿಕೆಗಳ ದುಷ್ಪರಿಣಾಮದ ಬಗ್ಗೆ ತಿಳಿಸಿಕೊಡಲಾಯಿತು. ಸಂಗೀತದೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸಂವಾದದ ಮೂಲಕ ಜಾಗೃತಿ ಮೂಡಿಸಲಾಯಿತು. ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ಕರಪತ್ರಗಳನ್ನು ವಿತರಿಸಲಾಯಿತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತ್ರಿನೇತ್ರ ಕೆ.ಆರ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>