ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವುದು, ಹಳಿಗಳ ಮೇಲೆ ಕಸ ಎಸೆಯುವುದು, ವಸ್ತುಗಳನ್ನು ಇಡುವುದು ಮುಂತಾದ ಚಟುವಟಿಕೆಗಳ ದುಷ್ಪರಿಣಾಮದ ಬಗ್ಗೆ ತಿಳಿಸಿಕೊಡಲಾಯಿತು. ಸಂಗೀತದೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸಂವಾದದ ಮೂಲಕ ಜಾಗೃತಿ ಮೂಡಿಸಲಾಯಿತು. ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ಕರಪತ್ರಗಳನ್ನು ವಿತರಿಸಲಾಯಿತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತ್ರಿನೇತ್ರ ಕೆ.ಆರ್. ತಿಳಿಸಿದ್ದಾರೆ.