<p><strong>ಬೆಂಗಳೂರು:</strong> ಯಶವಂತಪುರ ರೈಲು ನಿಲ್ದಾಣದಿಂದ ಗೋವಾಕ್ಕೆ ಹೊರಟಿದ್ದ ಯಶವಂತಪುರ– ವಾಸ್ಕೋಡ ಗಾಮ ಎಕ್ಸ್ಪ್ರೆಸ್ (17309) ರೈಲಿನ ಚೈನ್ ಎಳೆದು ರಾದ್ಧಾಂತ ನಡೆಸಲಾಗಿದ್ದು, ಪ್ರಶ್ನಿಸಲು ಹೋದ ಕ್ಷಿಪ್ರ ಕಾರ್ಯ ಪಡೆಯ ಸಿಬ್ಬಂದಿ ಮೇಲೆ ಸೋಮವಾರ ಹಲ್ಲೆ ನಡೆಸಲಾಗಿದೆ.</p><p>ಕೆಲವು ಪುಂಡರು ಈ ರೀತಿಯ ವರ್ತನೆ ತೋರಿದ್ದು, ಆರೋಪಿಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p><p>ರೈಲು ತಡೆದು ಹಲ್ಲೆ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.</p><p>‘ರೈಲಿನ ಎಸ್–3 ಬೋಗಿಯಲ್ಲಿ ಘಟನೆ ನಡೆದಿದೆ. ಆ ಬೋಗಿಯಲ್ಲಿ 14 ಮಂದಿ ಪ್ರಯಾಣಿಕರು ಇದ್ದರು. ಪುಂಡರು ರಾದ್ಧಾಂತ ನಡೆಸುತ್ತಿರುವುದನ್ನು ಅವರು ಪ್ರಶ್ನಿಸಿದ್ದರು. ಅವರ ಮಾತನ್ನು ಆರೋಪಿಗಳು ಕೇಳಿಸಿಕೊಂಡಿಲ್ಲ. ಪ್ರಯಾಣಿಕರು ನೀಡಿದ ಮಾಹಿತಿ ಮೇರೆಗೆ ಆ ಬೋಗಿಗೆ ತೆರಳಿ ಪರಿಶೀಲನೆ ನಡೆಸಿದಾಗ ಆರ್ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಮದ್ಯದ ನಶೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದಾರೆ.</p><p>ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಶವಂತಪುರ ರೈಲು ನಿಲ್ದಾಣದಿಂದ ಗೋವಾಕ್ಕೆ ಹೊರಟಿದ್ದ ಯಶವಂತಪುರ– ವಾಸ್ಕೋಡ ಗಾಮ ಎಕ್ಸ್ಪ್ರೆಸ್ (17309) ರೈಲಿನ ಚೈನ್ ಎಳೆದು ರಾದ್ಧಾಂತ ನಡೆಸಲಾಗಿದ್ದು, ಪ್ರಶ್ನಿಸಲು ಹೋದ ಕ್ಷಿಪ್ರ ಕಾರ್ಯ ಪಡೆಯ ಸಿಬ್ಬಂದಿ ಮೇಲೆ ಸೋಮವಾರ ಹಲ್ಲೆ ನಡೆಸಲಾಗಿದೆ.</p><p>ಕೆಲವು ಪುಂಡರು ಈ ರೀತಿಯ ವರ್ತನೆ ತೋರಿದ್ದು, ಆರೋಪಿಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p><p>ರೈಲು ತಡೆದು ಹಲ್ಲೆ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.</p><p>‘ರೈಲಿನ ಎಸ್–3 ಬೋಗಿಯಲ್ಲಿ ಘಟನೆ ನಡೆದಿದೆ. ಆ ಬೋಗಿಯಲ್ಲಿ 14 ಮಂದಿ ಪ್ರಯಾಣಿಕರು ಇದ್ದರು. ಪುಂಡರು ರಾದ್ಧಾಂತ ನಡೆಸುತ್ತಿರುವುದನ್ನು ಅವರು ಪ್ರಶ್ನಿಸಿದ್ದರು. ಅವರ ಮಾತನ್ನು ಆರೋಪಿಗಳು ಕೇಳಿಸಿಕೊಂಡಿಲ್ಲ. ಪ್ರಯಾಣಿಕರು ನೀಡಿದ ಮಾಹಿತಿ ಮೇರೆಗೆ ಆ ಬೋಗಿಗೆ ತೆರಳಿ ಪರಿಶೀಲನೆ ನಡೆಸಿದಾಗ ಆರ್ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಮದ್ಯದ ನಶೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದಾರೆ.</p><p>ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>