<p><strong>ಬೆಂಗಳೂರು:</strong> ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿನಗರದ ರೈಲ್ವೆ ನಿಲ್ದಾಣದ122 ಸಿಬ್ಬಂದಿಗೆ ಕೀಟ ನಿಯಂತ್ರಣ, ಕಸ ವಿಲೇವಾರಿ, ವಿಶ್ರಾಂತಿ ಕೊಠಡಿ ನಿರ್ವಹಣೆ ಸೇರಿದಂತೆ ವಿವಿಧ ವಿಭಾಗದಲ್ಲಿನೈಟ್ ಫ್ರಾಂಕ್ ಸಂಸ್ಥೆ ಕೌಶಲ ತರಬೇತಿ ನೀಡಿದೆ.</p>.<p>ನೈಟ್ ಫ್ರಾಂಕ್ ಸಂಸ್ಥೆ ಹಾಗೂ ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ನಿಗಮ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಸಿಬ್ಬಂದಿಗೆ ಬೆಂಗಳೂರು ನಗರ ರೈಲ್ವೆಯ ವಿಭಾಗೀಯ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾಪ್ರಮಾಣ ಪತ್ರ ವಿತರಿಸಿದರು.</p>.<p>‘ರೈಲ್ವೆ ನಿಲ್ದಾಣದ ಸಿಬ್ಬಂದಿಯ ಕೌಶಲ ವೃದ್ಧಿಯಿಂದ ಗುಣಮಟ್ಟದ ಇನ್ನಷ್ಟು ಸೇವೆಗಳನ್ನು ಒದಗಿಸುವ ಜತೆಗೆ ಪ್ರಯಾಣಿಕಸ್ನೇಹಿ ನಿಲ್ದಾಣವನ್ನಾಗಿ ಮಾರ್ಪಡಿಸಬಹುದು. ಅಷ್ಟೇ ಅಲ್ಲ, ದೇಶದಲ್ಲಿಯೇ ಮಾದರಿ ರೈಲ್ವೆ ನಿಲ್ದಾಣವನ್ನಾಗಿಸಲು ಸಾಧ್ಯ’ ಎಂದರು.</p>.<p>‘ತರಬೇತಿಯಿಂದಾಗಿ ಪ್ರಯಾಣಿಕರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವ ಜತೆಗೆ ಅವರ ಅನುಭವವನ್ನು ಶ್ರೀಮಂತಗೊಳಿಸಬಹುದು. ತರಬೇತಿ ಪಡೆದ ಸಿಬ್ಬಂದಿಯನ್ನು ವಿವಿಧ ವಿಭಾಗಗಳಲ್ಲಿ ನಿಯೋಜಿಸಲಾಗುತ್ತದೆ’ ಎಂದು ಹೇಳಿದರು.</p>.<p>ನೈಟ್ ಫ್ರಾಂಕ್ನ ಕಾರ್ಯಾಚರಣೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಮ ದೇವಗಿರಿ, ‘ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಕೌಶಲ ವೃದ್ಧಿಗೆ ತರಬೇತಿ ನೀಡಲಾಗುತ್ತದೆ’ ಎಂದರು.=</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿನಗರದ ರೈಲ್ವೆ ನಿಲ್ದಾಣದ122 ಸಿಬ್ಬಂದಿಗೆ ಕೀಟ ನಿಯಂತ್ರಣ, ಕಸ ವಿಲೇವಾರಿ, ವಿಶ್ರಾಂತಿ ಕೊಠಡಿ ನಿರ್ವಹಣೆ ಸೇರಿದಂತೆ ವಿವಿಧ ವಿಭಾಗದಲ್ಲಿನೈಟ್ ಫ್ರಾಂಕ್ ಸಂಸ್ಥೆ ಕೌಶಲ ತರಬೇತಿ ನೀಡಿದೆ.</p>.<p>ನೈಟ್ ಫ್ರಾಂಕ್ ಸಂಸ್ಥೆ ಹಾಗೂ ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ನಿಗಮ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಸಿಬ್ಬಂದಿಗೆ ಬೆಂಗಳೂರು ನಗರ ರೈಲ್ವೆಯ ವಿಭಾಗೀಯ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾಪ್ರಮಾಣ ಪತ್ರ ವಿತರಿಸಿದರು.</p>.<p>‘ರೈಲ್ವೆ ನಿಲ್ದಾಣದ ಸಿಬ್ಬಂದಿಯ ಕೌಶಲ ವೃದ್ಧಿಯಿಂದ ಗುಣಮಟ್ಟದ ಇನ್ನಷ್ಟು ಸೇವೆಗಳನ್ನು ಒದಗಿಸುವ ಜತೆಗೆ ಪ್ರಯಾಣಿಕಸ್ನೇಹಿ ನಿಲ್ದಾಣವನ್ನಾಗಿ ಮಾರ್ಪಡಿಸಬಹುದು. ಅಷ್ಟೇ ಅಲ್ಲ, ದೇಶದಲ್ಲಿಯೇ ಮಾದರಿ ರೈಲ್ವೆ ನಿಲ್ದಾಣವನ್ನಾಗಿಸಲು ಸಾಧ್ಯ’ ಎಂದರು.</p>.<p>‘ತರಬೇತಿಯಿಂದಾಗಿ ಪ್ರಯಾಣಿಕರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವ ಜತೆಗೆ ಅವರ ಅನುಭವವನ್ನು ಶ್ರೀಮಂತಗೊಳಿಸಬಹುದು. ತರಬೇತಿ ಪಡೆದ ಸಿಬ್ಬಂದಿಯನ್ನು ವಿವಿಧ ವಿಭಾಗಗಳಲ್ಲಿ ನಿಯೋಜಿಸಲಾಗುತ್ತದೆ’ ಎಂದು ಹೇಳಿದರು.</p>.<p>ನೈಟ್ ಫ್ರಾಂಕ್ನ ಕಾರ್ಯಾಚರಣೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಮ ದೇವಗಿರಿ, ‘ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಕೌಶಲ ವೃದ್ಧಿಗೆ ತರಬೇತಿ ನೀಡಲಾಗುತ್ತದೆ’ ಎಂದರು.=</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>