<p><strong>ಬೆಂಗಳೂರು</strong>: ಬೇರೆ ರಾಜ್ಯಗಳಿಂದ ಕಳ್ಳಸಾಗಣೆಯಾಗಿದ್ದ 7 ಮಕ್ಕಳನ್ನು ಬೆಂಗಳೂರು ರೈಲ್ವೆ ವಿಭಾಗದ ‘ನನ್ನೆ ಫರಿಸ್ತೇ’ ತಂಡ ರಕ್ಷಣೆ ಮಾಡಿದೆ.</p>.<p>ರಾಜಸ್ಥಾನದ ಬಿಲ್ವಾರದಿಂದ ಅಪಹರಿಸಲ್ಪಟ್ಟಿದ್ದ 14 ವರ್ಷದ ಬಾಲಕಿಯನ್ನು ಯಲಹಂಕ ರೈಲ್ವೆ ನಿಲ್ದಾಣದಲ್ಲಿ ಫೆ.19ರಂದು ರಕ್ಷಿಸಲಾಗಿದೆ. ಅಪಹರಿಸಿದ ತಂಡವನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲು ರಾಜಸ್ಥಾನ ಪೊಲೀಸರಿಗೆ ತಿಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಬಾಲ ಕಾರ್ಮಿಕ ಪದ್ಧತಿಗೆ ದೂಡಲ್ಪಟ್ಟಿದ್ದ ಬಿಹಾರದ ನಾಲ್ಕು ಮಕ್ಕಳು ಫೆ.19ರಂದು ತಪ್ಪಿಸಿಕೊಂಡು ಬಂದು ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದರು. ಅವರ ಜೊತೆಗೆ ಕಳ್ಳಸಾಗಣೆ ಮಾಡಲು ಬಳಕೆಯಾಗಿದ್ದ ತ್ರಿಪುರದ ಮತ್ತೊಬ್ಬ ಬಾಲಕನ್ನೂ ರಕ್ಷಿಸಲಾಗಿದೆ ಎಂದು ವಿವರಿಸಿದೆ.</p>.<p>ಮತ್ತೊಬ್ಬ ಬಾಲಕನನ್ನು ಮದ್ದೂರಿನಲ್ಲಿ ಮರದ ಉದ್ಯಮದಲ್ಲಿ ಕೆಲಸಕ್ಕೆ ದೂಡಲಾಗಿತ್ತು. ಆತ ಕೂಡ ಫೆ.22ರಂದು ತಪ್ಪಿಸಿಕೊಂಡು ಬಂದು ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದಾಗ ವಶಕ್ಕೆ ಪಡೆಯಲಾಗಿದೆ. ಎಲ್ಲ ಏಳು ಮಕ್ಕಳನ್ನು ನಿಗದಿಪಡಿಸಿದ ಎನ್ಜಿಒಗೆ ಒಪ್ಪಿಸಲಾಗಿದೆ ಎಂದು ಹೇಳಿದೆ.</p>.<p>2017ರಿಂದ ಈವರೆಗೆ ಕಳ್ಳ ಸಾಗಣೆಯಾಗುತ್ತಿದ್ದ 2,927 ಮಕ್ಕಳನ್ನು ನೈರುತ್ಯ ರೈಲ್ವೆಯ ವಿವಿಧ ನಿಲ್ದಾಣಗಳಲ್ಲಿ ರಕ್ಷಿಸಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೇರೆ ರಾಜ್ಯಗಳಿಂದ ಕಳ್ಳಸಾಗಣೆಯಾಗಿದ್ದ 7 ಮಕ್ಕಳನ್ನು ಬೆಂಗಳೂರು ರೈಲ್ವೆ ವಿಭಾಗದ ‘ನನ್ನೆ ಫರಿಸ್ತೇ’ ತಂಡ ರಕ್ಷಣೆ ಮಾಡಿದೆ.</p>.<p>ರಾಜಸ್ಥಾನದ ಬಿಲ್ವಾರದಿಂದ ಅಪಹರಿಸಲ್ಪಟ್ಟಿದ್ದ 14 ವರ್ಷದ ಬಾಲಕಿಯನ್ನು ಯಲಹಂಕ ರೈಲ್ವೆ ನಿಲ್ದಾಣದಲ್ಲಿ ಫೆ.19ರಂದು ರಕ್ಷಿಸಲಾಗಿದೆ. ಅಪಹರಿಸಿದ ತಂಡವನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲು ರಾಜಸ್ಥಾನ ಪೊಲೀಸರಿಗೆ ತಿಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಬಾಲ ಕಾರ್ಮಿಕ ಪದ್ಧತಿಗೆ ದೂಡಲ್ಪಟ್ಟಿದ್ದ ಬಿಹಾರದ ನಾಲ್ಕು ಮಕ್ಕಳು ಫೆ.19ರಂದು ತಪ್ಪಿಸಿಕೊಂಡು ಬಂದು ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದರು. ಅವರ ಜೊತೆಗೆ ಕಳ್ಳಸಾಗಣೆ ಮಾಡಲು ಬಳಕೆಯಾಗಿದ್ದ ತ್ರಿಪುರದ ಮತ್ತೊಬ್ಬ ಬಾಲಕನ್ನೂ ರಕ್ಷಿಸಲಾಗಿದೆ ಎಂದು ವಿವರಿಸಿದೆ.</p>.<p>ಮತ್ತೊಬ್ಬ ಬಾಲಕನನ್ನು ಮದ್ದೂರಿನಲ್ಲಿ ಮರದ ಉದ್ಯಮದಲ್ಲಿ ಕೆಲಸಕ್ಕೆ ದೂಡಲಾಗಿತ್ತು. ಆತ ಕೂಡ ಫೆ.22ರಂದು ತಪ್ಪಿಸಿಕೊಂಡು ಬಂದು ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದಾಗ ವಶಕ್ಕೆ ಪಡೆಯಲಾಗಿದೆ. ಎಲ್ಲ ಏಳು ಮಕ್ಕಳನ್ನು ನಿಗದಿಪಡಿಸಿದ ಎನ್ಜಿಒಗೆ ಒಪ್ಪಿಸಲಾಗಿದೆ ಎಂದು ಹೇಳಿದೆ.</p>.<p>2017ರಿಂದ ಈವರೆಗೆ ಕಳ್ಳ ಸಾಗಣೆಯಾಗುತ್ತಿದ್ದ 2,927 ಮಕ್ಕಳನ್ನು ನೈರುತ್ಯ ರೈಲ್ವೆಯ ವಿವಿಧ ನಿಲ್ದಾಣಗಳಲ್ಲಿ ರಕ್ಷಿಸಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>