‘ನಗರದ ಹೊಂಗಸಂದ್ರ ನಿವಾಸಿಯಾಗಿರುವ ರಮೇಶ್ ಚಂದ್ ಎಂಬುವರು ಅಜ್ಮೇರ್ಗೆ ತೆರಳಲು ಮಂಗಳವಾರ ರಾತ್ರಿ 9.30ರ ಸುಮಾರಿಗೆ ಕುಟುಂಬ ಸಮೇತರಾಗಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಬಟ್ಟೆ ಹಾಗೂ ಇತರೆ ಸಾಮಗ್ರಿಗಳು ತುಂಬಿದ್ದ 20 ಬ್ಯಾಗ್ಗಳನ್ನು ಜೊತೆಯಲ್ಲಿ ತಂದಿದ್ದರು. 350 ಗ್ರಾಂ ಚಿನ್ನಾಭರಣವಿದ್ದ ಸೂಟ್ಕೇಸ್ ಕೂಡ ಅವರ ಬಳಿ ಇತ್ತು. ಅದನ್ನು ಟಿಕೆಟ್ ಕೌಂಟರ್ ಬಳಿ ಮರೆತು ಹೋಗಿದ್ದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.