<p><strong>ಬೆಂಗಳೂರು</strong>: ಪ್ರಯಾಣಿಕರ ಸೋಗಿನಲ್ಲಿ ರೈಲಿನಲ್ಲಿ ಪ್ರಯಾಣಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಹೊಸೂರು ಬಳಿಯ ಮತ್ತಿಕೆರೆಯ ರೂಪಾ (33) ಹಾಗೂ ಲಾವಣ್ಯ (28) ಬಂಧಿತರು. ಇಬ್ಬರಿಂದಲೂ ₹ 10 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆ.ಆರ್.ಪುರ ನಿವಾಸಿ ಅಲೆಕ್ಸ್ ಎಂಬುವರು 2021ರ ಡಿಸೆಂಬರ್ 21ರಂದು ತಿರುಪತಿಗೆ ರೈಲಿನಲ್ಲಿ ಹೊರಟಿದ್ದರು. ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ’ ಎಂದೂ ತಿಳಿಸಿದರು.</p>.<p>'ಇತ್ತೀಚೆಗೆ ತಮಿಳುನಾಡು ಗಡಿಯಲ್ಲಿ ಮಹಿಳೆಯರಿಬ್ಬರು ಚಿನ್ನಾಭರಣವಿಟ್ಟುಕೊಂಡು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದರು. ಅವರನ್ನು ತಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ರೈಲಿನಲ್ಲಿ ಕಳ್ಳತನ ನಡೆಸಿದ್ದ ಬಗ್ಗೆ ಬಾಯ್ಬಿಟ್ಟಿದ್ದರು. ನಂತರವೇ ಮಹಿಳೆಯರನ್ನು ವಶಕ್ಕೆ ಪಡೆಯಲಾಯಿತು’ ಎಂದೂ ಹೇಳಿದರು.</p>.<p>‘ಹಸುಗೂಸು ಎತ್ತಿಕೊಂಡು ರೈಲಿಗೆ ಹತ್ತುತ್ತಿದ್ದ ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ಕಳ್ಳತನ ಮಾಡುತ್ತಿದ್ದರು. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಕಡೆಗಳಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಯಾಣಿಕರ ಸೋಗಿನಲ್ಲಿ ರೈಲಿನಲ್ಲಿ ಪ್ರಯಾಣಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಹೊಸೂರು ಬಳಿಯ ಮತ್ತಿಕೆರೆಯ ರೂಪಾ (33) ಹಾಗೂ ಲಾವಣ್ಯ (28) ಬಂಧಿತರು. ಇಬ್ಬರಿಂದಲೂ ₹ 10 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆ.ಆರ್.ಪುರ ನಿವಾಸಿ ಅಲೆಕ್ಸ್ ಎಂಬುವರು 2021ರ ಡಿಸೆಂಬರ್ 21ರಂದು ತಿರುಪತಿಗೆ ರೈಲಿನಲ್ಲಿ ಹೊರಟಿದ್ದರು. ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ’ ಎಂದೂ ತಿಳಿಸಿದರು.</p>.<p>'ಇತ್ತೀಚೆಗೆ ತಮಿಳುನಾಡು ಗಡಿಯಲ್ಲಿ ಮಹಿಳೆಯರಿಬ್ಬರು ಚಿನ್ನಾಭರಣವಿಟ್ಟುಕೊಂಡು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದರು. ಅವರನ್ನು ತಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ರೈಲಿನಲ್ಲಿ ಕಳ್ಳತನ ನಡೆಸಿದ್ದ ಬಗ್ಗೆ ಬಾಯ್ಬಿಟ್ಟಿದ್ದರು. ನಂತರವೇ ಮಹಿಳೆಯರನ್ನು ವಶಕ್ಕೆ ಪಡೆಯಲಾಯಿತು’ ಎಂದೂ ಹೇಳಿದರು.</p>.<p>‘ಹಸುಗೂಸು ಎತ್ತಿಕೊಂಡು ರೈಲಿಗೆ ಹತ್ತುತ್ತಿದ್ದ ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ಕಳ್ಳತನ ಮಾಡುತ್ತಿದ್ದರು. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಕಡೆಗಳಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>