‘ಬುಧವಾರ ಕರಾವಳಿಯಲ್ಲಿ ಅಲ್ಲಲ್ಲಿ ಸಣ್ಣದಾಗಿ ಮಳೆಯಾಗಿದೆ. ಆದರೂ, ಕೇರಳ ಭಾಗದಿಂದ ಮಳೆ ಬಲಿಷ್ಠವಾಗುವ ಸಾಧ್ಯತೆ ಕಡಿಮೆ. ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತ ಬಲಗೊಂಡರೆ ಈ ಭಾಗದ ಮೋಡಗಳನ್ನು ತನ್ನತ್ತ ಸೆಳೆದುಕೊಳ್ಳಲಿದೆ. ಆಗ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದುರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಸಂಸ್ಥೆಯ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ಹೇಳಿದರು.