ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಬಿರುಸಿನ ಮಳೆ

Last Updated 17 ಜುಲೈ 2021, 19:34 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ಶನಿವಾರ ಬಿರುಸಿನ ಮಳೆ ಸುರಿಯಿತು. ಕೆಲವು ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯಿತು.

ಶುಕ್ರವಾರ ರಾತ್ರಿಯೂ ಹಲವೆಡೆ ಮಳೆ ಆಗಿತ್ತು. ಶನಿವಾರವೂ ಮೋಡ ಕವಿದ ವಾತಾವರಣವಿತ್ತು. ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನ ಜೋರು ಮಳೆಯಾಯಿತು. ಕೆಲವೆಡೆ ಸಾಧಾರಣ ಮಳೆ ಇತ್ತು.

ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಬಡಾವಣೆ, ಯಶವಂತಪುರ, ಆರ್‌.ಟಿ.ನಗರ, ಹೆಬ್ಬಾಳ, ಶಿವಾಜಿನಗರ, ಅಶೋಕನಗರ, ಎಂ.ಜಿ.ರಸ್ತೆ, ಕೋರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್, ಶಾಂತಿನಗರ, ಬನಶಂಕರಿ, ಬಸವನಗುಡಿ, ಹನುಮಂತನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಆರಂಭಗೊಂಡ ಮಳೆ ರಾತ್ರಿಯವರೆಗೂ ಸುರಿಯಿತು.

ಸಂಜೆ ಬಿಡುವು ಕೊಡದೇ ಮಳೆ ಸುರಿದಿದ್ದರಿಂದ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಮೆಜೆಸ್ಟಿಕ್ ಬಳಿಯ ರೈಲ್ವೆ ಕೆಳ ಸೇತುವೆಯಲ್ಲಿ ಹರಿಯುವ ನೀರಿನಲ್ಲಿ ಕೆಲ ವಾಹನಗಳು ಕೆಟ್ಟು ನಿಂತಿದ್ದವು. ವಾಹನಗಳನ್ನು ತಳ್ಳುವ ಮೂಲಕ ಸ್ಥಳೀಯರು ಚಾಲಕರಿಗೆ ನೆರವಾದರು.

ಬಸವೇಶ್ವರನಗರ, ವಿಜಯನಗರ, ಜೆ.ಪಿ.ನಗರ, ತಲಘಟ್ಟಪುರದಲ್ಲಿ ಮರದ ದೊಡ್ಡ ಕೊಂಬೆಗಳು ಬಿದ್ದವು. ಕೆಲವು ಕಡೆ ವಾಹನಗಳ ಸಂಚಾರಕ್ಕೆ ಸ್ವಲ್ಪ ಹೊತ್ತು ತೊಂದರೆಯಾಯಿತು. ಸ್ಥಳೀಯರೇ ಕೊಂಬೆಗಳನ್ನು ತೆರವು
ಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

‘ಮಳೆಗಾಲ ಇರುವುದರಿಂದ ನಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಂಬೆಗಳು ಬಿದ್ದ ಬಗ್ಗೆ ಮಾತ್ರ ದೂರುಗಳು ಬಂದಿದ್ದವು. ಉಳಿದಂತೆ ಯಾವುದೇ ಹಾನಿ ಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT